ಚಿಕ್ಕಮಗಳೂರು : ದತ್ತಪೀಠದ ಯಾಗಶಾಲೆ ಸಮೀಪದಲ್ಲೇ ಮಾಂಸಾಹಾರ ಸೇವನೆ – ಹಿಂದೂ ಸಂಘಟನೆಗಳ ತೀವ್ರ ಆಕ್ರೋಶ

ಚಿಕ್ಕಮಗಳೂರು, ಜೂ. 06 : ಜಿಲ್ಲೆಯ ಧಾರ್ಮಿಕ ಶ್ರದ್ಧಾ ಕೇಂದ್ರ ದತ್ತಪೀಠದಲ್ಲಿ ಮತ್ತೆ ಮಾಂಸಾಹಾರ ಸೇವನೆ ನಡೆದಿರುವ ಆರೋಪ ಕೇಳಿಬಂದಿದ್ದು, ಈ ಕುರಿತು ಹಿಂದೂ ಸಂಘಟನೆಗಳ ಮುಖಂಡರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ಹಾಗೂ ಮುಸ್ಲಿಂ ಸಮುದಾಯಗಳ ಧಾರ್ಮಿಕ ಭಾವೈಕ್ಯತೆಯ ಕ್ಷೇತ್ರವೆಂದು ಗುರುತಿಸಲ್ಪಟ್ಟಿರುವ ದತ್ತಪೀಠದ ಹಕ್ಕುದಾರಿಕೆ ವಿಚಾರವಾಗಿ ಎರಡೂ ಸಮುದಾಯಗಳು ನ್ಯಾಯಾಲಯದಲ್ಲಿ ಹೋರಾಟ ನಡೆಸುತ್ತಿರುವ ನಡುವೆಯೇ ಈ ಆರೋಪ ಹೊಸ ವಿವಾದಕ್ಕೆ ಕಾರಣವಾಗಿದೆ.

ದತ್ತಪೀಠದ ಯಾಗಶಾಲೆ ಸಮೀಪದಲ್ಲೇ ಕೆಲವರು ಮಾಂಸಾಹಾರ ಸೇವನೆ ನಡೆಸಿರುವುದಾಗಿ ಹಿಂದೂ ಸಂಘಟನೆ ಮುಖಂಡ ರಘು ಸಕಲೇಶಪುರ ಆರೋಪಿಸಿದ್ದಾರೆ. ದತ್ತಪೀಠದ 200 ಮೀಟರ್ ವ್ಯಾಪ್ತಿಯಲ್ಲಿ ಮಾಂಸಾಹಾರ ಸೇವನೆ ನಿಷೇಧವಿದ್ದರೂ ನಿಯಮ ಉಲ್ಲಂಘನೆ ನಡೆದಿದ್ದು, ಇದಕ್ಕೆ ಜಿಲ್ಲಾಡಳಿತದ ನಿರ್ಲಕ್ಷ್ಯ ಹಾಗೂ ವೈಫಲ್ಯವೇ ಕಾರಣ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಣ್ಣಿಮೆ ಪೂಜೆಗೆ ತೆರಳಿದ್ದ ವೇಳೆ ಈ ಘಟನೆ ಗಮನಕ್ಕೆ ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ತತ್ ಕ್ಷಣ ಕ್ರಮ ಕೈಗೊಂಡು ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ. ಈ ಕುರಿತು ಜಿಲ್ಲಾಡಳಿತ ಅಥವಾ ಸಂಬಂಧಿತ ಅಧಿಕಾರಿಗಳ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಲಭ್ಯವಾಗಬೇಕಿದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.