ಬೆಳ್ತಂಗಡಿ : ಬಸ್ ನಿಲ್ದಾಣ ಸಮೀಪ ಕಾರೊಂದು ಪಾದಚಾರಿಗೆ ಡಿಕ್ಕಿಯಾದ ಘಟನೆ ವರದಿಯಾಗಿದೆ. ಅಪಘಾತದಲ್ಲಿ ಪಾದಚಾರಿ ಗಾಯಗೊಂಡಿದ್ದಾರೆಂದು ತಿಳಿದು ಬಂದಿದೆ.

ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಕಾರು ಡಿಕ್ಕಿಯಾಗಿದೆ. ಗಾಯಳುವನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.


