ಶ್ರೀ ಬಾಲಗಣಪತಿ ದೇವಸ್ಥಾನದಲ್ಲಿ ಮೂಲಮಂತ್ರ ಲಕ್ಷ ಜಪ ಯಜ್ಞ-ದೂರ್ವ ಹೋಮ- ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ : ಸಜೀಪಮೂಡ ಗ್ರಾಮದ ಇತಿಹಾಸ ಪ್ರಸಿದ್ಧಿ ದೇವಸ್ಥಾನ ಶ್ರೀ ಬಾಲಗಣಪತಿ ಅನ್ನಪ್ಪಾಡಿ ದೇವಸ್ಥಾನದಲ್ಲಿ ರಂದು ಶ್ರೀ ಮೂಲಮಂತ್ರ ಲಕ್ಷ ಜಪ ಯಜ್ಞ-ದೂರ್ವ ಹೋಮ ಹಾಗೂ ಚತುರ್ಥ ಪ್ರತಿಷ್ಠಾ ವರ್ಧಂತಿ ಹಾಗೂ ವಾರ್ಷಿಕ ಜಾತ್ರಾ ಉತ್ಸವವು ಡಿ. 28ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಇಂದು ಕ್ಷೇತ್ರದಲ್ಲಿ ನಡೆಯಿತು.
ಆಮಂತ್ರಣ ಪತ್ರಿಕೆಯನ್ನು ಸಜೀಪ‌ ಮಾಗಣೆ ತಂತ್ರಿಗಳಾದ ಎಮ್ ಸುಬ್ರಹ್ಮಣ್ಯ ಭಟ್ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಲಾಂಭನವನ್ನು ಮಮತ ಶೆಟ್ಟಿ ಬಿಡುಗಡೆಗೊಳಿಸಿದರು.
ಇನ್ನು ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಎಮ್ ಸುಬ್ರಹ್ಮಣ್ಯ ಭಟ್ ಇದು ಒಂದು ಪುಣ್ಯದ ಕಾರ್ಯಕ್ರಮ ಇತಿಹಾಸವುಳ್ಳ ಈ ಕ್ಷೇತ್ರದಲ್ಲಿ ಈ ಮಹಾ ಜಪ ಯಜ್ಞ ಕಾರ್ಯಕ್ರಮ ಯಶ್ವಸಿಯಾಗಿ ನಡೆಯಲಿ ಇಡೀ ಊರಿಗೆ ಶುಭವಾಗಲಿ ಎಂದು ಶುಭಹಾರೈಸಿದರು.

Advertisement



ಈ ಸಂದರ್ಭದಲ್ಲಿ ಶ್ರೀ ದೇವಿಪ್ರಸಾದ್ ಪೂಂಜ, ಶ್ರೀಕಾಂತ್ ಶೆಟ್ಟಿ ಸಂಕೇಶ ,ಶಿವರಾಮ್ ಭಂಡಾರಿ,ಶಾಂತಿರಾಜ ರೈ ಆರ್ಯಾಪು,ಸಂಜೀವ ಗುರುಸ್ವಾಮಿ, ದಿನೇಶ್ ಅಮ್ಟೂರು,ಗಿರೀಶ್ ಕುಮಾರ್ ಪೆರ್ವ ಉಪಸ್ಥಿತರಿದ್ದರು.ಇನ್ನು ಕಾರ್ಯಕ್ರಮದಲ್ಲಿ ಅಥಿತಿಗಳನ್ನು ಕ್ಷೇತ್ರದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಯಶಂತ್ ದೇರಾಜೆ ಸ್ವಾಗತಿಸಿದರು  ಹಾಗೂ ಪ್ರಶಾಂತ್ ಕಂದೂರು ಕಾರ್ಯಕ್ರಮ ನಿರೂಪಿಸಿದರು

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ರಧಾನಿಯವರ ಪೋಸ್ಟ್‌ಗೆ ನಿರ್ಬಂಧ ವಿವಾದ – ಫೇಸ್‌ಬುಕ್ ವಿರುದ್ಧ ಬಿಜೆಪಿ ಆಕ್ರೋಶ !

⚠️ Contents are protected on this website.