ಪುಂಜಾಲಕಟ್ಟೆ : ಪೊಲೀಸ್ ಸಿಬ್ಬಂದಿ ಚಲಾಯಿಸುತ್ತಿದ್ದ ಕಾರು ಢಿಕ್ಕಿಯಾಗಿ ಬೈಕ್ ಸವಾರ ಸಾವು – ಕಾರಿನಲ್ಲಿ ಶೇಂದಿ ಬಾಟಲಿ ಪತ್ತೆ ?

ಪುಂಜಾಲಕಟ್ಟೆ,ಡಿ. 30 : ಪೊಲೀಸ್ ಸಿಬ್ಬಂದಿಯೊಬ್ಬರು ಚಲಾಯಿಸುತ್ತಿದ್ದ ನ್ಯಾನೋ ಕಾರು ಮತ್ತು ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಮೃತಪಟ್ಟ ಘಟನೆಯೊಂದು ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಪಿಲಾತಬೆಟ್ಟು ಕಟ್ಟೆಮನೆ ಎಂಬಲ್ಲಿ ನಡೆದಿದೆ.

Advertisement

ಮಾರ್ನಬೈಲು ನಿವಾಸಿ ಇಮ್ರಾನ್ ಮೊಹಮ್ಮದ್ ತಾಹ ಎಂಬವರು ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಾರನ್ನು ಮಂಗಳೂರಿನ ಡಿಸಿಆರ್ ಇ ವಿಭಾಗದಲ್ಲಿ ಕರ್ತವ್ಯದಲ್ಲಿರುವ ಪ್ರಸನ್ನ ಎಂಬವರು ಚಲಾಯಿಸುತ್ತಿದ್ದರು ಎನ್ನಲಾಗಿದೆ. ಘಟನೆ ಸಂದರ್ಭದಲ್ಲಿ ಕಾರು ಮತ್ತು ಬೈಕ್‌ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಕಾರಿನ ಎದುರಿನ ಗ್ಲಾಸಿಗೆ ಬಿದ್ದು ಹೊರಗಡೆ ಎಸೆಯಲ್ಪಟ್ಟಿದ್ದಾನೆ. ಈ ವೇಳೆ, ಕಾಲು ತುಂಡಾಗಿದ್ದು, ತಲೆಗೆ ತೀವ್ರ ಏಟು ಬಿದ್ದು ಮೃತಪಟ್ಟಿದ್ದಾರೆ. ಕಾರು ಚಲಾಯಿಸುತ್ತಿದ್ದ ಪೊಲೀಸ್ ಪೇದೆ ಪ್ರಸನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ವೇಳೆ, ಸ್ಥಳದಲ್ಲಿದ್ದವರು ಕಾರಿನ ಒಳಗಡೆ ಶೇಂದಿಯನ್ನು ತುಂಬಿಸಿದ್ದ ಬಾಟಲಿ ಇರುವುದನ್ನು ಪತ್ತೆ ಮಾಡಿದ್ದು, ವಿಡಿಯೋ ಮಾಡಿ ಜಾಲತಾಣದಲ್ಲಿ ಹಾಕಿದ್ದಾರೆ. ಅಲ್ಲದೆ, ಕಾರಿನ ಒಳಗೆ ಪೊಲೀಸರು ಬಳಸುವ ಟೋಪಿ ಕಂಡುಬಂದಿದ್ದು, ಇದು ಯಾರದ್ದೋ ಪೊಲೀಸರದ್ದೇ ಕಾರು ಎನ್ನುವ ಗುಮಾನಿಯಲ್ಲಿ ಕುಡಿದು ವಾಹನ ಚಲಾಯಿಸಿದ್ದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳೆಯೊಬ್ಬರು ಮಾಡಿದ್ದ ಈ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಎಸ್ಪಿ ಅರುಣ್ ಅವರು ತನಿಖೆಗೆ ಸೂಚಿಸಿದ್ದು, ಸದ್ರಿ ಪೊಲೀಸ್ ಸಿಬಂದಿ ಪ್ರಸನ್ನ ಅವರನ್ನು ಆ ಮಹಿಳೆ ಮತ್ತು ಸಂತ್ರಸ್ತ ಯುವಕನ ಸಂಬಂಧಿಕರ ಸಮ್ಮುಖದಲ್ಲಿಯೇ ಪರೀಕ್ಷೆಗೆ ಒಳಪಡಿಸಿದ್ದಾರೆ. ಅಲ್ಲೋ ಮೀಟರಿನಲ್ಲಿ ತಪಾಸಣೆ ನಡೆಸಿದ ವೇಳೆ ನೆಗೆಟಿವ್ ಬಂದಿದ್ದು ರಕ್ತ ಪರೀಕ್ಷೆಯನ್ನೂ ನಡೆಸುವಂತೆ ಎಸ್ಪಿ ಸೂಚಿಸಿದ್ದಾರೆ. ಘಟನೆ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.