ಕಾರ್ಕಳ : ಮನೆಯೊಂದರಿಂದ ಹಿಡಿದ ಹಾವನ್ನು ಕಾಡಿಗೆ ಬಿಡಲು ತೆರಳುವಾಗ ಅಪಘಾತ – ಸ್ಕೂಟರ್ ಸವಾರ ಸಾವು

ಕಾರ್ಕಳ, ಮಾ. 24 : ಟಿಪ್ಪರ್ ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಸಹಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಮಾಳ ಮುಳ್ಳೂರು ಬಳಿ ನಡೆದಿದೆ.

Advertisement

ಬಜಗೋಳಿ ಡಿಡಿಂಬಿರಿ ನಿವಾಸಿ ನವೀನ್ ಮೃತರು ಎಂದು ಗುರುತಿಸಲಾಗಿದೆ. ಮೃತ ನವೀನ ರವರು ವೆಲ್ಡಿಂಗ್ ವೃತ್ತಿಯನ್ನು ಮಾಡುತ್ತಿದ್ದು, ಹಾವು ಹಿಡಿಯುವ ಹವ್ಯಾಸ ಹೊಂದಿದ್ದರು. ನಿನ್ನೆ ಹಿಡಿದ ಎರಡು ಹಾವುಗಳನ್ನು ಹಿಡಿದುಕೊಂಡು ಕಾಡಿಗೆ ಬಿಡಲು ತೆರಳಿದ್ದರು. ಈ ಸಂದರ್ಭ ಈ ದುರ್ಘಟನೆ ನಡೆದಿದೆ.

ನವೀನರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ತಂಡ, ಬಜಗೋಳಿ ಸ್ವಚ್ಛ ಬ್ರಿಗೇಡ್ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದು, ಹಲವು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.