ಕಾರ್ಕಳ : ಮನೆಯೊಂದರಿಂದ ಹಿಡಿದ ಹಾವನ್ನು ಕಾಡಿಗೆ ಬಿಡಲು ತೆರಳುವಾಗ ಅಪಘಾತ – ಸ್ಕೂಟರ್ ಸವಾರ ಸಾವು

ಕಾರ್ಕಳ, ಮಾ. 24 : ಟಿಪ್ಪರ್ ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಸಹಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಮಾಳ ಮುಳ್ಳೂರು ಬಳಿ ನಡೆದಿದೆ.

Advertisement

ಬಜಗೋಳಿ ಡಿಡಿಂಬಿರಿ ನಿವಾಸಿ ನವೀನ್ ಮೃತರು ಎಂದು ಗುರುತಿಸಲಾಗಿದೆ. ಮೃತ ನವೀನ ರವರು ವೆಲ್ಡಿಂಗ್ ವೃತ್ತಿಯನ್ನು ಮಾಡುತ್ತಿದ್ದು, ಹಾವು ಹಿಡಿಯುವ ಹವ್ಯಾಸ ಹೊಂದಿದ್ದರು. ನಿನ್ನೆ ಹಿಡಿದ ಎರಡು ಹಾವುಗಳನ್ನು ಹಿಡಿದುಕೊಂಡು ಕಾಡಿಗೆ ಬಿಡಲು ತೆರಳಿದ್ದರು. ಈ ಸಂದರ್ಭ ಈ ದುರ್ಘಟನೆ ನಡೆದಿದೆ.

ನವೀನರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ತಂಡ, ಬಜಗೋಳಿ ಸ್ವಚ್ಛ ಬ್ರಿಗೇಡ್ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದು, ಹಲವು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.