ಅಜ್ಮೀರ್ ಹತ್ಯಾಕಾಂಡ : ನಾಲ್ವರನ್ನು ಕೊಂದು ಕಾರೊಳಗೆ ಹಾಕಿ ಸುಟ್ಟ ಮೊದಲ ಪತ್ನಿ, ಮನೆಯಲ್ಲಿ ಮೂರ್ಛೆ ಹೋದಂತೆ ನಟಿಸಿದ್ದಳು ಹಂತಕಿ !

ಅಜ್ಮೀರ್, ಮೇ 29 : ರಾಜಸ್ಥಾನದ ಅಜ್ಮೀರ್​ನಲ್ಲಿ ಇತ್ತೀಚೆಗಷ್ಟೇ ಕಾರೊಂದು ಬೆಂಕಿಗೆ ಆಹುತಿಯಾಗಿತ್ತು. ಈ ಘಟನೆಯಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದರು. ಆದರೆ ಆ ಸಾವು ಸಹಜ ಸಾವಲ್ಲ ಕೊಲೆ(Murder) ಎಂಬುದು ಈಗ ತಿಳಿದುಬಂದಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿ, ಅಪಘಾತವೆಂದು ಬಿಂಬಿಸಲು ಶವಗಳಿದ್ದ ಕಾರಿಗೆ ಬೆಂಕಿ ಹಚ್ಚಲಾಗಿದೆ. ಅಚ್ಚರಿಯೆಂದರೆ, ಈ ಇಡೀ ಹತ್ಯಾಕಾಂಡದ ಮಾಸ್ಟರ್‌ಮೈಂಡ್ ಬೇರೆ ಯಾರೂ ಅಲ್ಲ, ಮೃತರ ಮನೆಯಲ್ಲೇ ಕಣ್ಣೀರಿಡುತ್ತಾ ಮೂರ್ಛೆ ಹೋದಂತೆ ನಟಿಸುತ್ತಿದ್ದ ಮೊದಲ ಪತ್ನಿ.

Advertisement

ಘಟನೆ ಏನು ?

ಅಜ್ಮೀರ್ ನಗರದಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಶ್ರೀರಾಂಪುರ ಗ್ರಾಮದ ಹೆದ್ದಾರಿಯಲ್ಲಿ ಸುಟ್ಟು ಕರಕಲಾದ ಸ್ಕಾರ್ಪಿಯೋ ಎಸ್‌ಯುವಿ (SUV) ಪತ್ತೆಯಾಗಿತ್ತು. ವಾಹನದೊಳಗೆ ಮೂರು ಮತ್ತು ಹತ್ತಿರದ ಹೊಲದಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಸುಟ್ಟ ಶವಗಳು ಸಿಕ್ಕಿದ್ದವು. ರಾಮ್ ಸಿಂಗ್ ಚೌಧರಿ (ಮಾಜಿ ಸರಪಂಚ್), ಪೂಸಿ ದೇವಿ (ರಾಮ್ ಸಿಂಗ್ ತಾಯಿ), ಸೂರ್ಯಜ್ಞಾನ ದೇವಿ (ರಾಮ್ ಸಿಂಗ್ ಎರಡನೇ ಪತ್ನಿ), ಮಹಿಮಾ ಚೌಧರಿ (ಚಿಕ್ಕಮ್ಮನ ಮಗಳು) ಮೃತರು ಎಂದು ಗುರುತಿಸಲಾಗಿದೆ.

ಅಪಘಾತವಲ್ಲ, ಇದು ಬರ್ಬರ ಕೊಲೆ

ಆರಂಭದಲ್ಲಿ ಪೊಲೀಸರು ಇದನ್ನು ರಸ್ತೆ ಅಪಘಾತ ಎಂದು ಶಂಕಿಸಿದ್ದರು. ಆದರೆ ವಿಧಿವಿಜ್ಞಾನ ತಜ್ಞರು (FSL) ಮತ್ತು ಪೊಲೀಸ್ ತಂಡ ಸ್ಥಳ ಪರಿಶೀಲನೆ ನಡೆಸಿದಾಗ ದೇಹದ ಮೇಲಿದ್ದ ಗಾಯಗಳು ಇವು ಕೊಲೆ ಎಂಬುದನ್ನು ಖಚಿತಪಡಿಸಿದವು. ಕೊಲೆಗಾರರು ಮೊದಲು ಮನೆಯಲ್ಲೇ ನಾಲ್ವರನ್ನು ಹತ್ಯೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸಲು ಶವಗಳನ್ನು ಸ್ಕಾರ್ಪಿಯೋ ಕಾರಿಗೆ ತುಂಬಿಸಿ ಹೆದ್ದಾರಿಗೆ ತಂದು ಬೆಂಕಿ ಹಚ್ಚಿದ್ದರು.

ಕಣ್ಣೀರಿಡುತ್ತಾ ಪೊಲೀಸರನ್ನೇ ಹಾದಿ ತಪ್ಪಿಸಿದ ಪತ್ನಿ

ಪೊಲೀಸರು ತನಿಖೆಗಾಗಿ ರಾಮ್ ಸಿಂಗ್ ಮನೆಗೆ ಹೋದಾಗ, ಅವರ ಮೊದಲ ಪತ್ನಿ ಸುನೀತಾ ಗ್ರಾಮದ ಮಹಿಳೆಯರ ನಡುವೆ ಕುಳಿತು ಜೋರಾಗಿ ಅಳುತ್ತಾ, ಎದೆಗೆ ಹೊಡೆದುಕೊಳ್ಳುತ್ತಾ ತೀವ್ರ ದುಃಖದಲ್ಲಿರುವಂತೆ ನಟಿಸುತ್ತಿದ್ದಳು. ತಾಯಿಗೆ ಎದೆನೋವು ಬಂದಿದ್ದರಿಂದ ರಾಮ್ ಸಿಂಗ್ ಆಸ್ಪತ್ರೆಗೆ ಕರೆದೊಯ್ದಿದ್ದರು ಎಂದು ಪೊಲೀಸರಿಗೆ ಸುಳ್ಳು ಕಥೆ ಹೇಳಿ ದಾರಿ ತಪ್ಪಿಸಲು ಯತ್ನಿಸಿದ್ದಳು.

ಪಿತೂರಿ ಬಯಲಾಗಿದ್ದು ಹೇಗೆ?

ಅಜ್ಮೀರ್ ಎಸ್‌ಪಿ ಹರ್ಷವರ್ಧನ್ ಅಗರ್‌ವಾಲ್ ನೇತೃತ್ವದ ತಂಡಕ್ಕೆ ಕೌಟುಂಬಿಕ ಹಿನ್ನೆಲೆ ಕೆದಕಿದಾಗ ಅಸಲಿ ಸತ್ಯ ತಿಳಿಯಿತು. ರಾಮ್ ಸಿಂಗ್ ಇಬ್ಬರು ಪತ್ನಿಯರೊಂದಿಗೆ ಒಂದೇ ಮನೆಯಲ್ಲಿ ವಾಸಿಸುತ್ತಿದ್ದರು. ಈ ಮದುವೆ ವಿಷಯವಾಗಿ ಮನೆಯಲ್ಲಿ ದೀರ್ಘಕಾಲದ ಆಸ್ತಿ ಮತ್ತು ಕೌಟುಂಬಿಕ ವಿವಾದವಿತ್ತು. ಬುಧವಾರ ತಡರಾತ್ರಿ ಮನೆಯಲ್ಲಿ ಭೀಕರ ಜಗಳ ನಡೆದಿದೆ. ಈ ವೇಳೆ ಮೊದಲ ಪತ್ನಿ ಸುನೀತಾ, ಆಕೆಯ ಮಗಳು ಸರಿತಾ ಮತ್ತು ಅಪ್ರಾಪ್ತ ಮಗ ಸೇರಿ ಹರಿತವಾದ ಆಯುಧಗಳಿಂದ ನಾಲ್ವರನ್ನು ಭೀಕರವಾಗಿ ಕತ್ತರಿಸಿ ಕೊಂದಿದ್ದಾರೆ.

ಗ್ರಾಮಸ್ಥರು ನೀಡಿದ ಸುಳಿವು ಮತ್ತು ತಾಂತ್ರಿಕ ಸಾಕ್ಷ್ಯಾಧಾರಗಳ ನೆರವಿನಿಂದ ಪೊಲೀಸರು ಆರೋಪಿ ಸುನೀತಾ ಹಾಗೂ ಆಕೆಯ ಇಬ್ಬರು ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಹತ್ಯೆಗೆ ಬಳಸಿದ ಆಯುಧಗಳನ್ನು ವಶಪಡಿಸಿಕೊಳ್ಳಲಾಗುತ್ತಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ. ಹಂತಕಿಯ ಈ ಕ್ರೂರ ನಾಟಕ ಇಡೀ ಗ್ರಾಮಸ್ಥರನ್ನು ಆಘಾತಕ್ಕೆ ದೂಡಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.