ಬಂಟ್ವಾಳ: ಅಕ್ರಮ ಗೋ ಸಾಗಾಟ ಆರೋಪ – ವಾಹನ ವಶಕ್ಕೆ, ಪ್ರಕರಣ ದಾಖಲು

ಬಂಟ್ವಾಳ, ಫೆ. 28 : ಅಕ್ರಮವಾಗಿಜಾನುವಾರು ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಪೊಲೀಸರು ವಾಹನವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ.

Advertisement

ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ವಿಟ್ಲ ಎಸೈ ರಾಮಕೃಷ್ಣ ಮತ್ತು ಸಿಬ್ಬಂದಿಗಳು ಪತ್ತೆ ಹಚ್ಚಿದ್ದು, ಮಂಡ್ಯ ನಿವಾಸಿಗಳಾದ ಚಾಲಕ ನವೀನ ಹಾಗೂ ಚೇತನ್ ಎಂಬವರನ್ನು ವಿಚಾರಿಸಿದ್ದಾರೆ. ವಾಹನವೊಂದು ರಸ್ತೆ ಬದಿಯಲ್ಲಿ ನಿಂತಿದ್ದು, ಅದರಲ್ಲಿ ಎರಡೂ ದನಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡಿಕೊಂಡು ಬಂದಿರುವುದು ಕಂಡುಬಂದಿರುತ್ತದೆ.

ಈ ಬಗ್ಗೆ ವಾಹನದಲ್ಲಿದ್ದ ಮಂಡ್ಯ ನಿವಾಸಿಗಳಾದ ಚಾಲಕ ನವೀನ ಹಾಗೂ ಮತ್ತೋರ್ವ ಚೇತನ್ ಎಂಬವರಲ್ಲಿ ವಿಚಾರಿಸಲಾಗಿ, ಚನ್ನರಾಯಪಟ್ಟಣದಿಂದ ಶಂಕರ ಎಂಬವರು ಸಾಲೆತ್ತೂರಿನ ಶಾಫಿ ಎಂಬವರಿಗೆ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ತುಂಬಿಸಿ ಕಳುಹಿಸಿದ್ದು, ಜಾನುವಾರುಗಳನ್ನು ಸಾಗಿಸಲು ಬೇರೆಯವರ ಹೆಸರಿನಲ್ಲಿ ದಾಖಲಾತಿಯನ್ನು ಪಡೆದು ಸಾಗಿಸುತ್ತಿರುವುದು ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.