ಬೆಳ್ತಂಗಡಿ : ಬಿಲ್ಲವ ಸಮಾಜಕ್ಕೆ ಅವಹೇಳನ ಆರೋಪ – ಅನಿತಾ ಕಾಸರಗೋಡು ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

ಬೆಳ್ತಂಗಡಿ, ಜೂ. 8 : ಬಿಲ್ಲವ ಸಮಾಜಕ್ಕೆ ಅಶ್ಲೀಲ ಪದಗಳಿಂದ ಅವಹೇಳನಗೈದು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಅನಿತಾ ಕಾಸರಗೋಡು ವಿರುದ್ಧ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Advertisement

ಅನಿತಾ ಕಾಸರಗೋಡು ಎಂಬ ಖಾತೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ “ಪೂಜಾರಿಗಳು ಮತ್ತು ಶೆಟ್ಟಿಗಳು ಎಂಬ ಜಾತಿಯ ಹೆಸರಿನ ಪದಗಳನ್ನು ಬಳಸಿ” ಅಶ್ಲೀಲವಾಗಿ ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಅನಿತಾ ಕಾಸರಗೋಡು ವಿರುದ್ಧ ಕಾನೂನಾತ್ಮಕವಾದ ಕ್ರಮವನ್ನು ಕೈಗೊಳ್ಳಬೇಕು, ಇಲ್ಲದೇ ಇದ್ದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ವತಿಯಿಂದ ಹೋರಾಟವನ್ನು ನಡೆಸಲಾಗುವುದು ಎಂದು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ಅಧ್ಯಕ್ಷರಾದ ಜಯವಿಕ್ರಮ ಕಲ್ಲಾಪುರವರು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ.) ಬೆಳ್ತಂಗಡಿ ಇದರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.