ಮಂಗಳೂರು : ಕೊಲೆ, ಸುಲಿಗೆ ಪ್ರಕರಣಗಳ ಆರೋಪಿ ಬೆಳ್ತಂಗಡಿಯ ದಿನೇಶ್ ನನ್ನು ಬಂಧಿಸಿದ ಮಂಗಳೂರು ಪೊಲೀಸರು

ಮಂಗಳೂರು : ನ್ಯಾಯವಾದಿ ನೌಶಾದ್ ಖಾಶಿಂಜಿ ಕೊಲೆ ಸಹಿತ ಹಲವು ಪ್ರಕರಣಗಳಲ್ಲಿ‌ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತ‌ ಆರೋಪಿ ಬೆಳ್ತಂಗಡಿ ತಾಲೂಕಿನ ಹೊಸಮನೆಯ ನಿವಾಸಿ ಟಿ. ದಿನೇಶ್ ಶೆಟ್ಟಿ ಯಾನೆ ದಿನ್ನು ಎಂದು ಗುರುತಿಸಲಾಗಿದೆ. ಆರೋಪಿಯಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬಂಧಿಸಿದೆ ಎಂದು ತಿಳಿದು ಬಂದಿದೆ.

Advertisement

ಭೂಗತ ಲೋಕದ ಪಾತಕಿ ರವಿ ಪೂಜಾರಿ ಮತ್ತು ಕಲಿ ಯೋಗೀಶ್ ನಿಂದ ಸುಪಾರಿ ಪಡೆದು ನ್ಯಾಯವಾದಿ ನೌಶಾದ್ ಖಾಶಿಂಜಿ ಅವರನ್ನು 2009ರಲ್ಲಿ ಕೊಲೆಗೈದ ಆರೋಪದಲ್ಲಿ ದಿನೇಶ್ ಶೆಟ್ಟಿಗೆ ಜೀವಾವಧಿ ಶಿಕ್ಷೆಯಾಗಿತ್ತು. ಆ ಪ್ರಕರಣದಲ್ಲಿ 11 ವರ್ಷ ಕಾರಾಗೃಹ ಶಿಕ್ಷೆ ಅನುಭವಿಸಿದ್ದ ಈತ ರಾಜ್ಯ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ 2019ರಲ್ಲಿ ಬಿಡುಗಡೆಗೊಂಡಿದ್ದ. ಆ ಬಳಿಕ ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪಹರಣ, ಮಂಗಳೂರು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ವಂಚನೆ ಮತ್ತು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದು ಬಂದಿದೆ. ಕಳೆದ ಒಂದೂವರೆ ವರ್ಷದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ದಿನೇಶ್‌ನನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ‌.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

⚠️ Contents are protected on this website.