ಮಂಗಳೂರು : ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್‌ ಸಿಬ್ಬಂದಿ ಹರೀಶ್ ಜಿ.ಎನ್. ಕುಟುಂಬಕ್ಕೆ ಆರ್ಥಿಕ ನೆರವು

ಮಂಗಳೂರು, ಜ.15: ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್‌ ಸಿಬ್ಬಂದಿ ಹರೀಶ್ ಜಿ.ಎನ್. ಕುಟುಂಬಕ್ಕೆ ಬ್ಯಾಂಕ್‌ ಆಫ್‌ ಬರೋಡಾ ಸಂಸ್ಥೆಯು ‘ಬ್ಯಾಂಕ್ ಆಫ್‌ ಬರೋಡಾ ಗ್ರೂಪ್ ಇನ್ಸೂರೆನ್ಸ್‌ ಯೋಜನೆಯಲ್ಲಿ 70 ಲಕ್ಷ ರೂ. ಮೊತ್ತದ ಆರ್ಥಿಕ ನೆರವು ನೀಡಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀ‌ರ್ ಕುಮಾರ್ ರೆಡ್ಡಿ ಅವರ ಮೂಲಕ ಬ್ಯಾಂಕ್ ಆಫ್ ಬರೋಡಾ ಮಂಗಳೂರು ನಗರ ಪ್ರಾದೇಶಿಕ ಮುಖ್ಯಸ್ಥ ಸಿ.ವಿ.ಎಸ್‌. ಚಂದ್ರಶೇಖ‌ರ್ ಅವರು ಈ ಚೆಕ್ ಅನ್ನು ಹರೀಶ್ ಕುಟುಂಬಕ್ಕೆ ಹಸ್ತಾಂತರಿಸಿದರು.

2015ರ ಫೆಬ್ರವರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ಕಂಕನಾಡಿ ನಗರ ಪೊಲೀಸ್‌ ಠಾಣೆಯ ಸಿಬ್ಬಂದಿ ಮೈಸೂರಿನ ಗಾಯ ಹಳ್ಳಿ ಗ್ರಾಮದ ಹರೀಶ್ ಜಿ.ಎನ್. ಮೃತಪಟ್ಟಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

⚠️ Contents are protected on this website.