ಬಂಟ್ವಾಳ, ಜು. 16 : ಯುವತಿಯನ್ನು ಬರ್ಬರವಾಗಿ ಹತ್ಯೆಗೈದ ಆರೋಪಿಯನ್ನು ಎನ್ ಕೌಂಟರ್ ಮಾಡುವಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದ್ದಾರೆ.
ಯುವತಿಯ ಮೃತದೇಹವನ್ನು ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಆಸ್ಪತ್ರೆಗೆ ಭೇಟಿ ನೀಡಿದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಅವರು, ಶೀಘ್ರವೇ ಆರೋಪಿಯನ್ನು ಪತ್ತೆ ಹಚ್ಚಿ, ಎನ್ ಕೌಂಟರ್ ಮಾಡುವಂತೆ ಆಗ್ರಹಿಸಿದ್ದಾರೆ.


