ಪುತ್ತೂರು : ನಗರದ ಸಾಮೆತ್ತಡ್ಕದಲ್ಲಿ ಒಂದು ಕೋಟಿ ರೂ ವೆಚ್ಚದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣವಾಗಲಿದ್ದು, ಕಟ್ಟಡ ಕಾಮಗಾರಿಗೆ ಶಾಸಕ ಅಶೋಕ್ ರೈ ಶಿಲಾನ್ಯಾಸ ನೆರವೇರಿಸಿದರು.
ಈ ಹಿಂದೆ ನೆಲ್ಲಿಕಟ್ಟೆ ಶಾಲಾ ಕಟ್ಟಡದಲ್ಲಿ ಈ ಕೇಂದ್ರ ನಡೆಸಲಾಗುತ್ತಿತ್ತು. ಈಗ, ಹೊಸ ಕಟ್ಟಡ ರಚನೆ ಕಾಮಗಾರಿಗೆ ಶಾಸಕರು ಶಿಲನ್ಯಾಸ ನೆರವೇರಿಸಿದ್ದಾರೆ.
ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ರೈ ಮಾತನಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಜನರಿಗೆ ಅನುಕೂಲವಾಗುತ್ತದೆ ಎಂದರು. ಈ ಸಂದರ್ಭದಲ್ಲಿ ಹಲವು ಗಣ್ಯರು, ನಾಗರಿಕರು ಉಪಸ್ಥಿತರಿದ್ದರು.

