ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಗುಂಡಿನ ದಾಳಿ – ಗ್ಯಾಂಗ್ ಸ್ಟರ್ ವಿನಯ್ ತ್ಯಾಗಿ ಸಾವು

ಹರಿದ್ವಾರ, ಡಿ. 28 : ಪೊಲೀಸರು ನ್ಯಾಯಾಲಯಕ್ಕೆ ಕರೆದೊಯ್ಯುವಾಗ ನಡೆದಿದ್ದ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗ್ಯಾಂಗ್ ಸ್ಟರ್ ವಿನಯ್ ತ್ಯಾಗಿ, ಮೂರು ದಿನಗಳ ನಂತರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ವಿನಯ್ ತ್ಯಾಗಿ ಹತ್ಯೆಗೆ ಪೊಲೀಸರ ಪಿತೂರಿ ಕಾರಣ ಎಂದು ಆರೋಪಿಸಿರುವ ಕುಟುಂಬದ ಸದಸ್ಯರು, ಈ ಕುರಿತು ಸಿಬಿಐ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

Advertisement

ಬುಧವಾರ ರೂರ್ಕೀ ಜೈಲಿನಿಂದ ಲಕ್ಸರ್ ನ್ಯಾಯಾಲಯಕ್ಕೆ ವಿನಯ್ ತ್ಯಾಗಿಯನ್ನು ಕರೆದೊಯ್ಯುವಾಗ, ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಲಕ್ಸರ್ ಪ್ರೈಓವರ್ ಬಳಿ ಆತನಿದ್ದ ಪೊಲೀಸ್ ವಾಹನದ ಮೇಲೆ ಮತ್ತು ವಿನಯ್ ತ್ಯಾಗಿ ಮೇಲೆ ಗುಂಡಿಕ್ಕಿದ್ದಾರೆ. ಈ ಘಟನೆಯಲ್ಲಿ ಪೊಲೀಸರು ಕೂಡ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಕುಖ್ಯಾತ ಸುನೀಲ್ ರಾಠಿ ಗ್ಯಾಂಗಿಗೆ ಸೇರಿದ ವಿನಯ್ ತ್ಯಾಗಿ ಮೇಲೆ ದುಷ್ಕರ್ಮಿಗಳು ಮೂರು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣವೇ ರಿಷಿಕೇಶ್ ಏಮ್ಸ್ ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಶನಿವಾರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.