ಬೆಳ್ತಂಗಡಿ : ಅತ್ತೆಯನ್ನೇ ಕತ್ತಿಯಿಂದ ಕಡಿದು ಕೊಲೆಗೈಯ್ಯಲೆತ್ನಿಸಿದ ಅಳಿಯ

ಬೆಳ್ತಂಗಡಿ, ಮೇ 21 : ಹಳೆ ದ್ವೇಷವನ್ನು ಇಟ್ಟುಕೊಂಡು ಅತ್ತೆ ಮನೆಗೆ ಹೋಗಿ ಅವ್ಯಾಚ ಶಬ್ದಗಳಿಂದ ಅಳಿಯ ಬೈದು ಬಳಿಕ ಕತ್ತಿಯಿಂದ ಕಡಿದು ಕೋಲೆಗೆ ಯತ್ನಿಸಿದ ಪ್ರಕರಣ ಸಂಬಂಧ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement

ಪ್ರಕರಣದ ವಿವರ: ಆರೋಪಿ ಪ್ರಸನ್ನ ಕುಮಾರ್ ದೂರುದಾರ ಸುಜಾತ ಅವರ ಗಂಡನ ತಮ್ಮನಾಗಿದ್ದು ಸುಮಾರು 3 ರಿಂದ 4 ವರ್ಷಗಳ ಹಿಂದೆ ಆರೋಪಿ ಪ್ರಸನ್ನ ಕುಮಾ‌ರ್ ತನ್ನ ಸಂಬಂಧಿ ಸತೀಶ್ ಎಂಬವರಿಗೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ ಆರೋಪಿತನಾಗಿ ಜೀವನ ಪರ್ಯಾಂತ ಜೈಲಿನಲ್ಲಿ ಕೊಳೆಯಬೇಕು ಎಂದು ಹೇಳುತ್ತಿದ್ದ.

ಈ ವಿಚಾರದಲ್ಲಿ ದ್ವೇಷ ಹೊಂದಿ ಆಗಾಗ ದೂರುದಾರರ 54 ವರ್ಷದ ತಾಯಿಯೊಂದಿಗೆ ಮಾತಿನ ಗಲಾಟೆ ನಡೆಸಿ ದೂರುದಾರರ ತಾಯಿಯನ್ನು ಕೊಲೆ ಮಾಡಿ ಬಳಿಕ ದೂರುದಾರರನ್ನು ಕೊಲೆ ಮಾಡುವುದಾಗಿ ಹೇಳುತ್ತಿದ್ದು. ಇದೇ ವಿಚಾರದಲ್ಲಿ ಪೂರ್ವ ದ್ವೇಷ ಹೊಂದಿ ಮೇ.19 ರಂದು ಮದ್ಯಾಹ್ನ ಸುಮಾರು 12:45 ಗಂಟೆಯಿಂದ 1 ಗಂಟೆಯ ಅವಧಿಯಲ್ಲಿ ಬೆಳ್ತಂಗಡಿ ತಾಲೂಕು ಆರಂಬೋಡಿ ಗ್ರಾಮದ ದೆಲೋಡಿ ಮನೆಗೆ ದೂರುದಾರರ ಮನೆಗೆ ಅಕ್ರಮ ಪ್ರವೇಶ ಮಾಡಿ ಮಾರಕ ಆಯುಧವಾದ ಉದ್ದನೆಯ ಕತ್ತಿಯನ್ನು ಹಿಡಿದು ದೂರುದಾರರ ತಾಯಿಯನ್ನು ಉದ್ದೇಶಿಸಿ ಅವ್ಯಾಚ ಶಬ್ದಗಳಿಂದ ಬೈದು ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಹೇಳಿ ಕತ್ತಿಯಿಂದ ತಲೆಗೆ, ಮುಖಕ್ಕೆ, ಕೈಕಾಲುಗಳಿಗೆ ಕಡಿದು ತೀವ್ರ ಹಲ್ಲೆ ನಡೆಸಿದ್ದು ದೂರುದಾರರ ತಾಯಿಯನ್ನು ಮೂಡಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.