ಉಳ್ಳಾಲ : ಆಟೋ ರಿಕ್ಷಾ ಕಳವು ಪ್ರಕರಣ – ಆಟೋ ಸಹಿತ, ಆರೋಪಿಯ ಬಂಧನ

Advertisement

ಉಳ್ಳಾಲ, ಡಿ. 29 : ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿ, ಆಟೋ ರಿಕ್ಷಾ ವಶಪಡಿಸಿಕೊಂಡಿದ್ದಾರೆ.

Advertisement

ಅಕ್ಕರೆ ಕೆರೆ ನಿವಾಸಿ ಮುಹಮ್ಮದ್ ಶಾಝಿಲ್ (29) ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಬಂಧಿಸಿರುವ ಪೊಲೀಸರು ಕಳವುಗೈದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ. ಚೋಟ ಮಂಗಳೂರು ನಿವಾಸಿ ನರೇಂದ್ರ ಕುಮಾರ್ ಅವರು ತನ್ನ ಆಟೋ ರಿಕ್ಷಾವನ್ನು ತನ್ನ ಮನೆಯ ಕಂಪೌಂಡ್ ನ ಹೊರಗಡೆ ಇರುವ ಭಗವತಿ ರಸ್ತೆಯಲ್ಲಿ ಡಿ.13ರಂದು ರಾತ್ರಿ ನಿಲ್ಲಿಸಿದ್ದರು.

Advertisement

ಈ ರಿಕ್ಷಾವು ಕಳವಾಗಿದ್ದು, ಈ ಘಟನೆ ಡಿ.14 ರಂದು ಬೆಳಿಗ್ಗೆ ಬೆಳಕಿಗೆ ಬಂದಿತ್ತು. ಈ ಬಗ್ಗೆ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಡಿ.19ರಂದು ಈ ಕುರಿತು ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ