ಕಾರ್ಕಳ, ಜು. 27 : ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿರುವ ಅವಿನಾಶ್ ಪೂಜಾರಿ ಅವರ ಚಿಕಿತ್ಸಾ ವೆಚ್ಚಕ್ಕಾಗಿ “ವಿಠೋಬ ರುಕ್ಮಾಯಿ ಭಜನಾ ಮಂಡಳಿ ಹಿರ್ಗಾನ-ಕಾರ್ಕಳ” ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದೆ.
ವಿಠೋಬ ರುಕ್ಮಾಯಿ ಭಜನಾ ಮಂಡಳಿ ಹಿರ್ಗಾನ ಕಾರ್ಕಳ ಭಜನಾ ಮಂಡಳಿ, ಹಿರ್ಗಾನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಮೂರ್ತೆದಾರರ ಸಂಘದ ಅಧ್ಯಕ್ಷರಾದ ಸಂತೋಷ್ ಪೂಜಾರಿ ಹಾಗೂ ಗೆಳೆಯರ ಬಳಗದವರು ಸಂಗ್ರಹಿಸಿದ ಒಟ್ಟು 35,500/- ರೂ. ಮೊತ್ತವನ್ನು ತೆಳ್ಳಾರಿನ ಅವಿನಾಶ್ ಪೂಜಾರಿಯವರ ಸಂಬಂಧಿಕರ ಮನೆಗೆ ಆಗಮಿಸಿ, ಹಣವನ್ನು ಹಸ್ತಾಂತರಿಸಿದ್ದಾರೆ.
ಭಜನಾ ಮಂಡಳಿಯ ಮಾನವೀಯ ಕಾರ್ಯಕ್ಕೆ ಸ್ಥಳೀಯರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.


