ಹೊಸದಿಲ್ಲಿ : ರಾಮಮಂದಿರ ನಿರ್ಮಾಣಕ್ಕಾಗಿ ಬಂದ ದೇಣಿಗೆ ಹಣದಲ್ಲಿ ಅವ್ಯವಹಾರ ನಡೆದಿಲ್ಲ !

ಹೊಸದಿಲ್ಲಿ, ಆ. 08 : ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕಾಗಿ ಜನರಿಂದ ಬಂದ ದೇಣಿಗೆ ಹಣದಲ್ಲಿ ಯಾವುದೇ ಅವ್ಯವಹಾರ ಆಗಿಲ್ಲವೆಂದು ಕೇಂದ್ರ ಸರಕಾರಿ ಮೂಲಗಳು ಸ್ಪಷ್ಟಪಡಿಸಿವೆ. ಆದರೆ ರಾಮನ ದೇಗುಲಕ್ಕೆ ಬಂದ ಕಾಣಿಕೆಯಲ್ಲಿ ಮಾತ್ರ ಕಳ್ಳತನ ನಡೆದಿದೆ ಎನ್ನಲಾಗಿದೆ. ಸ್ವತಂತ್ರವಾಗಿ ಕೈಕೊಂಡ ಲೆಕ್ಕ ಪರಿ ಶೋಧನೆ ಯಲ್ಲಿ ಈ ವಿಚಾರ ಬಯಲಾಗಿದೆ.

Advertisement

ಮಂದಿರ ನಿರ್ಮಾಣಕ್ಕಾಗಿ ನೀಡಲಾದ 3,300 ಕೋ.ರೂ. ದೇಣಿಗೆ ಖರ್ಚಾದ ಲೆಕ್ಕಾಚಾರವನ್ನು ವಿ. ಶಂಕರ್ ಅಯ್ಯರ್ ಆ್ಯಂಡ್ ಕಂ. ಎಂಬ ಆಡಿಟಿಂಗ್ ಸಂಸ್ಥೆ ವತಿಯಿಂದ ಸ್ವತಂತ್ರವಾಗಿ ಪರಿಶೋಧನೆ ನಡೆಸಲಾಗಿದೆ. ರಾಮಮಂದಿರ ನಿರ್ಮಾಣಕ್ಕೆ ಭೂಮಿ ಖರೀದಿಗಾಗಿ 400 ಕೋ. ರೂ., ದೇವಸ್ಥಾನ ನಿರ್ಮಾಣಕ್ಕಾಗಿ 1,800 ಕೋ. ರೂ.ಗಳನ್ನು ಖರ್ಚು ಮಾಡಲಾಗಿದೆ. ಜಾಗ ಖರೀದಿಯಲ್ಲಿ ಅವ್ಯವಹಾರ ಆಗಿದೆ ಎಂಬ ಆರೋಪಗಳು ಸುಳ್ಳು. ಜಾಗ ಕೊಟ್ಟವರ ಅಧಿಕೃತ ಬ್ಯಾಂಕ್ ಖಾತೆಗೆ, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಅಧಿಕೃತ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆಯಾಗಿದೆ ಎಂದು ಉಲ್ಲೇಖೀಸಲಾಗಿದೆ.

Advertisement

ರಾಮಮಂದಿರ ಉದ್ಘಾಟನೆ ಬಳಿಕ ನಡೆದಿದೆ ಎನ್ನಲಾಗಿರುವ ಹುಂಡಿ ಹಣ ಸೋರಿಕೆಯ ತನಿಖೆ ಯನ್ನು ಪುನರ್‌ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮೂಲಕ ನಡೆಸಲಾಗುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಭಾರತದ ಅಧಿಕೃತ ನಕ್ಷೆಗಳಲ್ಲಿ ಅರುಣಾಚಲ ಪ್ರದೇಶದ 27 ಸ್ಥಳಗಳ ಸೇರ್ಪಡೆ – ಚೀನಾಗೆ ಶಾಕ್ !

ಕರಾವಳಿ, ಟಾಪ್ ಸುದ್ದಿಗಳು

ಉಡುಪಿ : ಕಾಂಗ್ರೆಸ್ ಮುಖಂಡ ಡೇವಿಡ್ ಶೂಟೌಟ್ ಪ್ರಕರಣ – ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಪುತ್ತೂರು, ಬೆಳ್ತಂಗಡಿ, ಸುಳ್ಯ  ಕಡಬ  ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ

⚠️ Contents are protected on this website.