ಅಯೋಧ್ಯೆ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಸಮರ್ಪಣೆ

Advertisement

ಅಯೋಧ್ಯೆ, ಜ. 23 : ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ 286 ಕೆಜಿ ತೂಕದ ಭಾರೀ ಸ್ವರ್ಣ ಧನಸ್ಸು ಆಗಮಿಸಿದೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಈ ಅಪರೂಪದ ಧನಸ್ಸು ಅಯೋಧ್ಯೆ ರಾಮ ಮಂದಿರದ ಭಕ್ತರಿಗೆ ಸಂತಸ ತಂದಿದೆ.

ಈ ಸ್ವರ್ಣ ಧನುಸ್ಸನ್ನು ತಮಿಳುನಾಡಿನ ಕಾಂಚೀಪುರಂನ ಮಹಿಳಾ ಕುಶಲಕರ್ಮಿಗಳು ನೈಪುಣ್ಯದಿಂದ ರೂಪಿಸಿದ್ದಾರೆ. ಚಿನ್ನ, ಬೆಳ್ಳಿ, ತಾಮ್ರ, ಸತು ಹಾಗೂ ಕಬ್ಬಿಣದ ಮಿಶ್ರಲೋಹದಿಂದ ಈ ಧನಸ್ಸು ತಯಾರಿಸಲ್ಪಟ್ಟಿದ್ದು, ಅದರ ನಿರ್ಮಾಣ ಕಾರ್ಯ ಒಡಿಶಾದಲ್ಲಿ ಪೂರ್ಣಗೊಂಡಿದೆ.

ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು, ಮಂದಿರದ ಉದ್ಘಾಟನೆಯ ಬಳಿಕ ದೇಶದ ನಾನಾ ಭಾಗಗಳಿಂದ ಭಕ್ತರು ದರ್ಶನಕ್ಕೆ ಹರಿದು ಬರುತ್ತಿದ್ದಾರೆ. ದಿನೇದಿನೇ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಮ ಮಂದಿರ ಭಕ್ತಿಯ ಕೇಂದ್ರವಾಗುತ್ತಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.