ಅಯೋಧ್ಯೆ ರಾಮ ಮಂದಿರಕ್ಕೆ 286 ಕೆಜಿ ತೂಕದ ಸ್ವರ್ಣ ಧನಸ್ಸು ಸಮರ್ಪಣೆ

Advertisement

ಅಯೋಧ್ಯೆ, ಜ. 23 : ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ 286 ಕೆಜಿ ತೂಕದ ಭಾರೀ ಸ್ವರ್ಣ ಧನಸ್ಸು ಆಗಮಿಸಿದೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಈ ಅಪರೂಪದ ಧನಸ್ಸು ಅಯೋಧ್ಯೆ ರಾಮ ಮಂದಿರದ ಭಕ್ತರಿಗೆ ಸಂತಸ ತಂದಿದೆ.

ಈ ಸ್ವರ್ಣ ಧನುಸ್ಸನ್ನು ತಮಿಳುನಾಡಿನ ಕಾಂಚೀಪುರಂನ ಮಹಿಳಾ ಕುಶಲಕರ್ಮಿಗಳು ನೈಪುಣ್ಯದಿಂದ ರೂಪಿಸಿದ್ದಾರೆ. ಚಿನ್ನ, ಬೆಳ್ಳಿ, ತಾಮ್ರ, ಸತು ಹಾಗೂ ಕಬ್ಬಿಣದ ಮಿಶ್ರಲೋಹದಿಂದ ಈ ಧನಸ್ಸು ತಯಾರಿಸಲ್ಪಟ್ಟಿದ್ದು, ಅದರ ನಿರ್ಮಾಣ ಕಾರ್ಯ ಒಡಿಶಾದಲ್ಲಿ ಪೂರ್ಣಗೊಂಡಿದೆ.

ಅಯೋಧ್ಯೆಯ ರಾಮ ಮಂದಿರ ನಿರ್ಮಾಣ ಕಾರ್ಯ ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು, ಮಂದಿರದ ಉದ್ಘಾಟನೆಯ ಬಳಿಕ ದೇಶದ ನಾನಾ ಭಾಗಗಳಿಂದ ಭಕ್ತರು ದರ್ಶನಕ್ಕೆ ಹರಿದು ಬರುತ್ತಿದ್ದಾರೆ. ದಿನೇದಿನೇ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾಮ ಮಂದಿರ ಭಕ್ತಿಯ ಕೇಂದ್ರವಾಗುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.