ಬಾರ್ಯ : ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ರಸ್ತೆ ಕಾಂಕ್ರಿಟ್ ಕಾಮಗಾರಿ ಪೂರ್ಣಗೊಂಡಿದ್ದು, ಇದೀಗ ಸಂಚಾರಕ್ಕೆ ಯೋಗ್ಯವಾಗಿದೆ. ಈ ಭಾಗದ ನಾಗರಿಕರ ಹಲವಾರು ವರ್ಷಗಳ ಬೇಡಿಕೆಯ ರಸ್ತೆ ಇದಾಗಿದ್ದು, ಇದೀಗ ಶಾಸಕರಾದ ಹರೀಶ್ ಪೂಂಜಾ’ರವರು ನೀಡಿದ ಭರವಸೆಯಂತೆಯೇ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಸುಮಾರು 10 ಲಕ್ಷ ಅನುದಾನ ಒದಗಿಸಿದ್ದಾರೆ.

ಬಾರ್ಯ ಗ್ರಾಮದ ಮುಜ್ಜಾಳೆ -ಪೆರಿಯೊಟ್ಟು ಭಾಗದ ಕಾಂಕ್ರಿಟ್ ರಸ್ತೆ ಕಾಮಗಾರಿ ಇದೀಗ ಪೂರ್ಣಗೊಂಡು, ಸಾರ್ವಜನಿಕ ಮುಕ್ತವಾಗಿದೆ. ಅನುದಾನ ಒದಗಿಸಿದ ಶಾಸಕರಿಗೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ.


