ಬಜ್ಪೆ : ಮತ್ತೆ ಯುವಕನೋರ್ವನ ಮೇಲೆ ತಲವಾರು ದಾಳಿ – ಗಂಭೀರ

ಬಜ್ಜೆ : ಎಡಪದವು ಎಂಬಲ್ಲಿ ಯುವಕನೋರ್ವನಿಗೆ 4 ಮಂದಿ ದುಷ್ಕರ್ಮಿಗಳು ತಲವಾರು ದಾಳಿ ಮಾಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ಎಡಪದವು ಪೂಪಾಡಿ ಕಲ್ಲು ನಿವಾಸಿ ಅಖಿಲೇಶ್ ತಲವಾರು ದಾಳಿಗೆ ಒಳಗಾದವರು ಎಂದು ತಿಳಿದು ಬಂದಿದ್ದು, ಇವರ ಬಲಕೈಗೆ ತಲವಾರು ದಾಳಿಯ ಗಂಭೀರ ಗಾಯವಾಗಿದೆ.

ಅಖಿಲೇಶ್ ಅವರು ಎಡಪದವು ಕಡೆಯಿಂದ ಮಂಗಳೂರು ಕಡೆಗೆ ತನ್ನ ಆಕ್ಟಿವಾದಲ್ಲಿ ಹೋಗುತ್ತಿದ್ದ ಸಂದರ್ಭ ಎಡಪದವಿನಲ್ಲಿ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ತಲವಾರಿನಿಂದ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ.

ಘಟನೆ ನಡೆದ ತಕ್ಷಣ ಸ್ಥಳದಲ್ಲಿ ಜಮಾವಣೆಗೊಂಡ ಸಾರ್ವಜನಿಕರು ಅಖಿಲೇಶ್ ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಇವರು ಸ್ಥಳಿಯವಾಗಿ ಕೇಟರಿಂಗ್ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.