ಮೂಡುಬಿದಿರೆ : ಅಮ್ಮನೊಂದಿಗೆ ಅಂಗಡಿಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ – ಅಮ್ಮನ ಕಣ್ಣೆದುರೇ ಬಾಲಕ ಕೊನೆಯುಸಿರು !

ಮೂಡುಬಿದಿರೆ, ಜ. 01 : ತಾಯಿಯೊಂದಿಗೆ ಅಂಗಡಿಗೆ ತೆರಳುತ್ತಿದ್ದ ಬಾಲಕನೋರ್ವನಿಗೆ ಕಾರು ಢಿಕ್ಕಿಯಾಗಿ, ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾರೂರು ಹೊಸಂಗಡಿ ಬಳಿ ನಡೆದಿದೆ.

Advertisement

ಹೊಸಂಗಡಿಯ ನಝೀರ್ ಎಂಬವರ ಪುತ್ರ ಝಾಹಿರ್ (13) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಝಾಹಿರ್ ಸ್ಥಳೀಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಇಂದು ಮಧ್ಯಾಹ್ನ ತಾಯಿಯೊಂದಿಗೆ ಅಂಗಡಿಗೆಂದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗಿದೆ.

ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.