ಪುತ್ತೂರು, ಡಿ. 18 : ಪುರುಷರಕಟ್ಟೆ- ಶಿಬರ – ನಡುವಾಲ್ ರಸ್ತೆ ಅಭಿವೃದ್ಧಿಯ ಮತ್ತು ಶಾಶ್ವತ ರಸ್ತೆ ನಿರ್ಮಾಣಕ್ಕೆ ಅನುದಾನ ಒದಗಿಸಿಕೊಟ್ಟ ಶಾಸಕರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ ಬ್ಯಾನರನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ. ಘಟನೆಯ ಬಗ್ಗೆ ನರಿಮೊಗರು ವಲಯ ಕಾಂಗ್ರೆಸ್ ಅಧ್ಯಕ್ಷ ಹೊನ್ನಪ್ಪ ಕೈಂದಾಡಿಯವರು ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಗ್ರಾಮದ ನಡುವಾಲ್ ಎಂಬಲ್ಲಿಗೆ ರಸ್ತೆ ನಿರ್ಮಾಣ ಕಾಮಗಾರಿಗೆ 5 ಲಕ್ಷ ಅನುದಾನವನ್ನು ಶಾಸಕ ಅಶೋಕ್ ರೈ ಅವರು ಒದಗಿಸಿದ್ದರು. ಈ ಸಂಬಂಧ ಸ್ಥಳೀಯರು ಶಾಸಕರಿಗೆ ಅಭಿನಂದನೆ ಸಲ್ಲಿಸಿ ಬ್ಯಾನರ್ ಅಳವಡಿಸಿದ್ದರು. ಈ ಬ್ಯಾನರನ್ನು ಕಿಡಿಗೇಡಿಗಳು ಹರಿದು ಹಾಕಿದ್ದು, ಆರೋಪಿಗಳನ್ನು ಬಂಧಿಸುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ. ಇದೇ ವಿಚಾರಕ್ಕೆ ಸಂಬಂದಿಸಿದಂತೆ ದೇವರು ಹಾಗೂ ದೈವಕ್ಕೂ ಹರಕೆ ಸಲ್ಲಿಸಲಾಗಿದೆ ಎಂಬ ಮಾಹಿತಿ ಕೂಡಾ ಲಭ್ಯವಾಗಿದೆ.

