ಬಂಟ್ವಾಳ : ಸಜಿಪದಲ್ಲಿ ಕಾಣೆಯಾದ ರಸ್ತೆ -ಬಂಟ್ವಾಳ ಶಾಸಕರು, ಅಧಿಕಾರಿಗಳು ಮೌನ

ಬಂಟ್ವಾಳ : ತಾಲೂಕಿನ ಸಜೀಪದ ರಸ್ತೆ ಕಾಣೆಯಾಗಿದೆ ವಾಹನ ಸವಾರರು ರಸ್ತೆ ಎಲ್ಲಿದೆ ಎಂದು ಹುಡುಕಿಕೊಂಡು ಹೋಗುವ ಪರಿಸ್ಥಿತಿ ಎದುರಾಗಿದೆ. ಹಿಂದೆಯೂ ನಮ್ಮ ಧ್ವನಿ ನ್ಯೂಸ್ ಈ ಸಾವಿನ ಗುಂಡಿಗಳಿರುವ ರಸ್ತೆಯ ಬಗ್ಗೆ ವರದಿ ಮಾಡಿದ್ದು, ತಕ್ಷಣ ಮರುದಿನವೇ ನಿದ್ದೆಯಲ್ಲಿದ್ದ ಅಧಿಕಾರಿಗಳು ಎದ್ದು ಬಂದು ಕಾಟಾಚಾರಕ್ಕೆ ರಸ್ತೆ ಗುಂಡಿ ಮುಚ್ಚಿಸಿದ್ದಾರೆ ಆದರೆ ಎರಡೇ ದಿನಕ್ಕೆ ಅದು ಎದ್ದು ಹೋಗಿದೆ.

Advertisement

ಇದೀಗ, ರಸ್ತೆಗಳು ಮಾಯವಾಗಿದ್ದು ಬಹುದೊಡ್ಡ ಗುಂಡಿಗಳು ಮಾತ್ರ ಕಾಣಸಿಗುತ್ತಿದೆ. ಎಷ್ಟೇ ಬಾರಿ ಮನವಿ ಮಾಡಿದರೂ ಬಂಟ್ವಾಳ ಶಾಸಕರು ಮತ್ತು ಅಧಿಕಾರಿಗಳು ಮಾತ್ರ ನಿದ್ದೆಯಲ್ಲಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆ ಬದಿಯಲ್ಲಿನ ನಿವಾಸಿಗಳು, ಸ್ಥಳೀಯರು ರಸ್ತೆಯಿಂದ ಬರುವ ಧೂಳಿನಿಂದ ಕಂಗಲಾಗಿದ್ದಾರೆ. ಧೂಳು ಕಡಿಮೆಯಾಗಲು ಪ್ರತೀ ದಿನ ತಾವೇ ಸ್ವತ: ರಸ್ತೆಗೆ ನೀರು ಸಿಂಪಡಿಸುವ ಕೆಲಸ ಮಾಡುತ್ತಿದ್ದಾರೆ.

ಒಟ್ಟಾರೆಯಾಗಿ ಮಳೆ ನಿಂತ ಮೇಲೆ ಎಲ್ಲವನ್ನು ಸರಿ ಮಾಡುತ್ತೇವೆ ಎಂದಿದ್ದ ಅಧಿಕಾರಿಗಳು ಮತ್ತು ಶಾಸಕರು ಎಲ್ಲಿದ್ದಾರೆ ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.