ಬಂಟ್ವಾಳ : ಯುವತಿಯ ಹತ್ಯೆ ಪ್ರಕರಣದಲ್ಲಿ “ಭಜರಂಗ ದಳ”ದ ವಿರುದ್ಧ ಸುಳ್ಳು ಸುದ್ದಿ – ಪ್ರಕರಣ ದಾಖಲು

ಬಂಟ್ವಾಳ, ಜು. 17 : ಬಿಸಿರೋಡ್‌ ಬಸ್ ನಿಲ್ದಾಣದಲ್ಲಿ ಅಮಾಯಕ ಯುವತಿ ಲಾವಣ್ಯ ಹತ್ಯೆ ಪ್ರಕರಣದ ಆರೋಪಿಯ ಭಾವಚಿತ್ರವನ್ನು ತಿರುಚಿ, ಅದಕ್ಕೆ ಕೇಸರಿ ಶಾಲು ಹಾಗೂ ಕುಂಕುಮವನ್ನು ಸೇರಿಸಿ, “ಭಜರಂಗ ದಳದ ಮುಖಂಡ ಚೇತನ” ಹಾಗೂ “ಭಜರಂಗ ದಳದ ಶಾಖೆಯಿಂದ ತರಬೇತಿ ಪಡೆದಿದ್ದ” ಎಂಬ ಸುಳ್ಳು ಮಾಹಿತಿಯೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಕೋಮು ಸೌಹಾರ್ದತೆ ಕದಡುವ ಯತ್ನ ನಡೆಸಲಾಗಿದೆ ಎಂದು ಆರೋಪಿಸಿ ಬಂಟ್ವಾಳ ಪೊಲೀಸ್ ಠಾಣೆಗೆ ವಿಹಿಂಪ ನ ಉಪಾಧ್ಯಕ್ಷ ಕೇಶವರವರು ದೂರು ನೀಡಿದ್ದಾರೆ.

Advertisement

ದೂರಿನ ಪ್ರಕಾರ, ಆರೋಪಿಯ ತಿರುಚಿದ ಭಾವಚಿತ್ರ ಹಾಗೂ ಪ್ರಚೋದನಕಾರಿ ಸಂದೇಶಗಳನ್ನು ವಾಟ್ಸ್ ಆಪ್ ಗುಂಪುಗಳು ಮತ್ತು ಇನ್‌ಸ್ಟಾಗ್ರಾಮ್ ಖಾತೆಗಳ ಮೂಲಕ ವ್ಯಾಪಕವಾಗಿ ಹಂಚಲಾಗಿದ್ದು, ಇದರಿಂದ ಸಮಾಜದಲ್ಲಿ ಕೋಮು ಉದ್ವಿಗ್ನತೆ ಮತ್ತು ಗಲಭೆಗಳು ಸೃಷ್ಟಿಯಾಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ. ಈ ಸಂಬಂಧ ಕಾನೂನುಬಾಹಿರ ಕೃತ್ಯ ಎಸಗಿರುವವರನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ರಧಾನಿಯವರ ಪೋಸ್ಟ್‌ಗೆ ನಿರ್ಬಂಧ ವಿವಾದ – ಫೇಸ್‌ಬುಕ್ ವಿರುದ್ಧ ಬಿಜೆಪಿ ಆಕ್ರೋಶ !

⚠️ Contents are protected on this website.