ಬೆಳ್ತಂಗಡಿ, ಫೆ. 16 : ಇಲ್ಲಿಯ ಸಂತೆಕಟ್ಟೆ ಬಳಿ ಇರುವ ಹೇರಾಜೆ ಕಾಂಪ್ಲೆಕ್ಸ್ ನ ಕಾಫ್ ಕ್ರಿಯೇಟಿವ್ ಆರ್ಟ್ ಅಂಡ್ ಕ್ರಾಫ್ಟ್ ಸೆಂಟರ್ ಮಳಿಗೆಯಲ್ಲಿ ಫೆ. 14ರಂದು ಬೆಳಗ್ಗೆ ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಅಗ್ನಿ ಅವಘಢ ಉಂಟಾದ ಘಟನಾ ಸ್ಥಳಕ್ಕೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಸಂತ್ರಸ್ಥೆಯ ಆರೋಗ್ಯ ವಿಚಾರಿಸಿದರು.


