ಮಂಗಳೂರು : ಪೊಲೀಸರ ಬೈಕ್ ಕೂಡಾ ಬಿಡದ ಖದೀಮರು – ನಿಲ್ಲಿಸಿದ ಬೈಕ್ ಅರ್ಧ ಗಂಟೆಯಲ್ಲಿ ಕಳವು !

File Photo

ಮಂಗಳೂರು, ಜ. 08 : ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ ಸ್ಟೆಬಲ್ ಓರ್ವರ ಬೈಕ್ ನಿಲ್ಲಿಸಿದ ಅರ್ಧ ಗಂಟೆಯಲ್ಲಿ ಕಳವು ಮಾಡಿದ ಘಟನೆ ನಗರದಲ್ಲಿ ನಡೆದಿದೆ.

Advertisement

ನಗರದ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯ ಪೊಲೀಸ್ ಕಾನ್ ಸ್ಟೆಬಲ್ ಪುನೀತ್ ಬಿ.ವೈ ಅವರು ಜ.5ರಂದು ಕೆ.ಬಿ.ಕಟ್ಟೆಯಲ್ಲಿ ಕರ್ತವ್ಯಕ್ಕಾಗಿ ಸಂಜೆ 5.30 ಕ್ಕೆ ತಂದೆಯ ಹೆಸರಿನಲ್ಲಿರುವ ಹೋಂಡಾ ಶೈನ್ ಬೈಕ್ ನಲ್ಲಿ ಬಂದು ಅಲ್ಲಿನ ಸುಲಭ್ ಶೌಚಾಲಯದ ಪಾವತಿ ವಾಹನ ನಿಲುಗಡೆ ಸ್ಥಳದಲ್ಲಿ ನಿಲ್ಲಿಸಿ, ಕೆ.ಬಿ ಕಟ್ಟೆ ಜಂಕ್ಷನ್ ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದರು.

ಅನಂತರ ಸುಮಾರು 6 ಕ್ಕೆ ವಾಪಸು ಬಂದು ನೋಡಿದಾಗ ಬೈಕ್ ಕಳವಾಗಿತ್ತು ಎನ್ನಲಾಗಿದೆ. ಪೊಲೀಸರ ಬೈಕೆ ಕಳವಾಗುವಾಗ ಜನಸಾಮಾನ್ಯರ ಪಾಡೇನು ಎಂದು ಸಾರ್ವಜನಿಕರು ವಿಷಾದ ವ್ಯಕ್ತಪಡಿಸುತ್ತಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.