ಚಿಕ್ಕಮಗಳೂರು : ಯುವತಿಗೆ ಹುಟ್ಟುಹಬ್ಬದ ಶುಭಾಷಯ ಕೋರಿ ಸಂದೇಶ – ಕೊಂದೇ ಬಿಟ್ಟರು ಸ್ನೇಹಿತರು !

ಚಿಕ್ಕಮಗಳೂರು, ಜ. 01 : ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣದ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿ ಮೆಸೇಜ್ ಮಾಡಿದ ಕಾರಣಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

Advertisement

ಉಡೇವಾ ಮೂಲದ ಮಂಜುನಾಥ್ (28) ಕೊಲೆಯಾದ ಯುವಕ, ಯುವತಿಯೊಂದಿಗೆ ವಿವಾಹ ನಿಶ್ಚಿತಾರ್ಥವಾಗಿದ್ದ ಯುವಕ ವೇಣು ಮತ್ತು ಇತರರು ಕೊಲೆ ಆರೋಪಿಗಳು ಎಂದು ಹೇಳಲಾಗಿದೆ.

ವೇಣುವಿನ ಜೊತೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಗೆ ಮಂಜುನಾಥ್ ಹುಟ್ಟುಹಬ್ಬದ ಶುಭಾಶಯ ಕೋರಿ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ ಮಾಡಿದ್ದನೆನ್ನಲಾಗಿದೆ. ಈ ವಿಚಾರವಾಗಿ ವೇಣು ಮತ್ತು ಮಂಜುನಾಥ್ ಮಧ್ಯೆ ಅತ್ತಿಗನಾಳು ಗ್ರಾಮದಲ್ಲಿ ಬುಧವಾರ ಗಲಾಟೆ ನಡೆದಿದೆ. ಇದು ಅತಿರೇಕಕ್ಕೆ ತಿರುಗಿದ್ದು, ವೇಣು ಹಾಗೂ ಸ್ನೇಹಿತರು ಮಂಜುನಾಥ್ ರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಮಂಜುನಾಥ್ ರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ತರೀಕೆರೆ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ರಾಜ್ಯದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ನೂತನ ಸಿಎಂ ಡಿಕೆಶಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

⚠️ Contents are protected on this website.