ಚಿಕ್ಕಮಗಳೂರು : ಯುವತಿಗೆ ಹುಟ್ಟುಹಬ್ಬದ ಶುಭಾಷಯ ಕೋರಿ ಸಂದೇಶ – ಕೊಂದೇ ಬಿಟ್ಟರು ಸ್ನೇಹಿತರು !

ಚಿಕ್ಕಮಗಳೂರು, ಜ. 01 : ಯುವತಿಯೊಬ್ಬಳಿಗೆ ಸಾಮಾಜಿಕ ಜಾಲತಾಣದ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಿ ಮೆಸೇಜ್ ಮಾಡಿದ ಕಾರಣಕ್ಕೆ ಯುವಕನೋರ್ವನನ್ನು ಚೂರಿಯಿಂದ ಇರಿದು ಕೊಲೆಗೈದ ಘಟನೆ ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ.

Advertisement

ಉಡೇವಾ ಮೂಲದ ಮಂಜುನಾಥ್ (28) ಕೊಲೆಯಾದ ಯುವಕ, ಯುವತಿಯೊಂದಿಗೆ ವಿವಾಹ ನಿಶ್ಚಿತಾರ್ಥವಾಗಿದ್ದ ಯುವಕ ವೇಣು ಮತ್ತು ಇತರರು ಕೊಲೆ ಆರೋಪಿಗಳು ಎಂದು ಹೇಳಲಾಗಿದೆ.

ವೇಣುವಿನ ಜೊತೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಗೆ ಮಂಜುನಾಥ್ ಹುಟ್ಟುಹಬ್ಬದ ಶುಭಾಶಯ ಕೋರಿ ಸಾಮಾಜಿಕ ಜಾಲತಾಣದಲ್ಲಿ ಮೆಸೇಜ್ ಮಾಡಿದ್ದನೆನ್ನಲಾಗಿದೆ. ಈ ವಿಚಾರವಾಗಿ ವೇಣು ಮತ್ತು ಮಂಜುನಾಥ್ ಮಧ್ಯೆ ಅತ್ತಿಗನಾಳು ಗ್ರಾಮದಲ್ಲಿ ಬುಧವಾರ ಗಲಾಟೆ ನಡೆದಿದೆ. ಇದು ಅತಿರೇಕಕ್ಕೆ ತಿರುಗಿದ್ದು, ವೇಣು ಹಾಗೂ ಸ್ನೇಹಿತರು ಮಂಜುನಾಥ್ ರಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ದೂರಲಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ಮಂಜುನಾಥ್ ರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ. ಈ ಬಗ್ಗೆ ತರೀಕೆರೆ ಠಾಣೆಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.