ಬೀದ‌ರ್ : ಬಿಸಿಲಿನ ಝಳದಿಂದ ತಲೆತಿರುಗಿ ಕುಸಿದು ಬಿದ್ದು 20 ವರ್ಷದ ಯುವಕನೊಬ್ಬ ಸಾವು

ಬೀದ‌ರ್, ಏ. 20 : ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದ ರಸ್ತೆ ಬಳಿ ಬಿಸಿಲಿನ ತೀವ್ರತೆಗೆ ಯುವಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.

Advertisement

ಉತ್ತರ ಪ್ರದೇಶದ ಮಿರ್ಜಾಪುರ್ ಪಲ್ಲಾ ಗ್ರಾಮದ ನಿವಾಸಿ ಮುಹಮ್ಮದ್ ಸಮೀರ್ (20) ಮೃತ ಯುವಕ ಎಂದು ತಿಳಿದು ಬಂದಿದೆ. ಕೆಲಸದ ನಿಮಿತ್ತ ಕೆಲ ದಿನಗಳ ಹಿಂದೆ ಕಮಲನಗರಕ್ಕೆ ಬಂದಿದ್ದನು ಎನ್ನಲಾಗಿದೆ.


ಎ.14ರಂದು ಬೆಳಿಗ್ಗೆ ತರಕಾರಿ ತರಲು ತೆರಳಿದ್ದ ಸಮೀರ್, ಮನೆಗೆ ವಾಪಸ್ಸಾಗುವ ವೇಳೆ ಬಿಸಿಲಿನ ಝಳದಿಂದ ತಲೆತಿರುಗಿ ಸಮೀಪದ ಮೆಕಾನಿಕ್ ಅಂಗಡಿಯಲ್ಲಿ ನೀರು ಕುಡಿದು ವಿಶ್ರಾಂತಿ ಪಡೆದಿದ್ದನು. ಬಳಿಕ ಮನೆಗೆ ತೆರಳುವಾಗ ಡಿಗ್ಗಿ ಗ್ರಾಮದ ರಸ್ತೆ ಬಳಿ ಕುಸಿದು ಬಿದ್ದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಬಿಸಿಲಿನ ಪರಿಣಾಮವೇ ಸಾವಿಗೆ ಕಾರಣ ಎಂದು ಮೃತನ ತಂದೆ ಲಯಿಕ್ ಅಹ್ಮದ್ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಮಲನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಚೆಕ್ ಬೌನ್ಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ತೀರ್ಪು ನೀಡಿದ ಕರ್ನಾಟಕ ಹೈಕೋರ್ಟ್

ಕರಾವಳಿ, ಟಾಪ್ ಸುದ್ದಿಗಳು

ಕಾರ್ಕಳ : ಮನೆಯ ಕಂಪೌಂಡ್ ಒಳಗೆ ನಿಲ್ಲಿಸಿದ್ದ ಸ್ಕೂಟಿ ಕಳವುಗೈದ ಕಳ್ಳ !

⚠️ Contents are protected on this website.