ಕುಂದಾಪುರ, ಜೂ. 03 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಕುಂದಾಪುರ ಕಾಂಗ್ರೆಸ್ನ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿಯವರು ಭೇಟಿಯಾಗಿ ಶುಭಕೋರಿದರು.

ಈ ಸಂದರ್ಭ ವಿಧಾನಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಪಿ.ವಿ. ಮೋಹನ್, ಯುವ ನಾಯಕ ರಕ್ಷಿತ್ ಶಿವರಾಮ್ ಮೊದಲಾದವರಿದ್ದರು.


