ಬಂಟ್ವಾಳ : ಮಗನ ಸೈಕಲ್‌ಗೆ ಗಾಳಿ ಹಾಕಿಸಲು ಹೋಗುತ್ತಿದ್ದಾಗ ಅಪಘಾತ – ತಂದೆ ದಾರುಣ ಸಾವು

ಬಂಟ್ವಾಳ, ಏ. 02 : ಮಗನ ಹೊಸ ಸೈಕಲ್‌ಗೆ ಗಾಳಿ ಹಾಕಿಸಲು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೊಲೆರೊ ಪಿಕಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ರಾಷ್ಟ್ರೀಯ ಹೆದ್ದಾರಿ 75ರ ಕೈಕಂಬದ ಶಾಂತಿ ಅಂಗಡಿ ಎಂಬಲ್ಲಿ ನಡೆದಿದೆ.

Advertisement

ಮೃತರನ್ನು ಶಾಂತಿ ಅಂಗಡಿ ನಿವಾಸಿ ಗಾಡ್ವಿನ್ ಪಿಂಟೊ (49) ಎಂದು ಗುರುತಿಸಲಾಗಿದೆ.

ಗಾಡ್ವಿನ್ ಅವರು ಮಂಗಳವಾರವಷ್ಟೇ ತನ್ನ ಮಕ್ಕಳಿಗೆ ಹೊಸ ಸೈಕಲ್ ತಂದಿದ್ದರು. ಸೈಕಲ್ ಟೈರ್‌ನಲ್ಲಿ ಗಾಳಿ ಇಲ್ಲದ ಕಾರಣ, ಬುಧವಾರ ಸಮೀಪದ ಸೈಕಲ್ ಅಂಗಡಿಗೆ ಗಾಳಿ ಹಾಕಿಸಲು ಹೋಗುತ್ತಿದ್ದರು. ಈ ಸಂದರ್ಭದಲ್ಲಿ ವೇಗವಾಗಿ ಬಂದ ಬೊಲೆರೊ ಪಿಕಪ್ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಗಾಡ್ವಿನ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಗಾಡ್ವಿನ್ ಅವರು ಬಿ.ಸಿ.ರೋಡ್‌ನ ತಲಪಾಡಿಯಲ್ಲಿ ವಾಹನ ಪೇಂಟಿಂಗ್ ಕೆಲಸ ಮಾಡುತ್ತಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಿಜೆಪಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ – ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ಪ್ರಕಟ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಬಸ್ ಪ್ರಯಾಣದ ವೇಳೆ ಮಹಿಳೆಯ ಚಿನ್ನದ ಸರ ಕಳವು – ದೂರು ದಾಖಲು

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : 2017ರ ಲಾಠಿ ಚಾರ್ಜ್ ಪ್ರಕರಣ – ಎಲ್ಲಾ 101 ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ

⚠️ Contents are protected on this website.