ಬೆಳ್ತಂಗಡಿ : ಧರ್ಮಸ್ಥಳದ ಬುರುಡೆ ಗ್ಯಾಂಗ್ ಪ್ರಕರಣ – ಮಾ.5ಕ್ಕೆ ವಿಚಾರಣೆ ಮುಂದೂಡಿ ನ್ಯಾಯಾಲಯ ಆದೇಶ

ಬೆಳ್ತಂಗಡಿ, ಫೆ. 13 : ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ದೇಗುಲವನ್ನು ಸಂತ್ರಸ್ತ ಎಂದು ಪರಿಗಣಿಸುವಂತೆ ಕ್ಷೇತ್ರದ ಪರವಾಗಿ ಹಿರಿಯ ನ್ಯಾಯವಾದಿ ಸಿ.ವಿ. ನಾಗೇಶ್ ತಂಡ ಸಲ್ಲಿರುವ ಅರ್ಜಿ ಮತ್ತು ಧರ್ಮಸ್ಥಳ ಕ್ಷೇತ್ರದ ಪರ ಸಲ್ಲಿಸಿರುವ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿ ರಾಷ್ಟ್ರೀಯ ಹಿಂದು ಜಾಗರಣ ವೇದಿಕೆ ಮುಖ್ಯಸ್ಥ ಮಹೇಶ್ ಶೆಟ್ಟಿ ತಿಮರೋಡಿ ಪರ ಹಿರಿಯ ನ್ಯಾಯವಾದಿ ದೊರೆರಾಜು ನೇತೃತ್ವದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದ ಮುಂದಿನ ವಿಚಾರಣೆ ಮಾ.5ಕ್ಕೆ ಮುಂದೂಡಿಕೆಯಾಗಿದೆ.

Advertisement

ಧರ್ಮಸ್ಥಳ ಪರ ವಕೀಲ ಸಿ.ವಿ.ನಾಗೇಶ್ ಮತ್ತು ಎಸ್‌ಐಟಿ ಪರ ನ್ಯಾಯವಾದಿ ದಿವ್ಯರಾಜ್ ಹೆಗ್ಡೆ ಅವರ ವಾದವನ್ನು ನ್ಯಾಯಾಲಯ ಆಲಿಸಿತ್ತು. ಧರ್ಮಸ್ಥಳ ದೇಗುಲದ ಪರ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿ ಮಹೇಶ್ ಶೆಟ್ಟಿ ತಿಮರೋಡಿ ಪರ ವಕೀಲ ವಿಜಯ ವಾಸು ಪೂಜಾರಿ ಅವರು ವಾದ ಮಂಡಿಸಲು ಮುಂದಾಗಿದ್ದರಾದರೂ ಅವರಿಗೆ ಕಾಲಾವಕಾಶ ದೊರೆತಿರಲಿಲ್ಲ. ಈ ಹಿನ್ನೆಲೆಯಲ್ಲಿ ಫೆ.6ಕ್ಕೆ ವಿಚಾರಣೆ ಮುಂದೂಡಲ್ಪಟ್ಟಿತ್ತು. ಫೆ.5ರಂದು ನ್ಯಾಯಾಲಯದಲ್ಲಿ ಈ ಕುರಿತು ಯಾವುದೇ ಪರ-ವಿರೋಧ ವಾದ ಮಂಡನೆ ನಡೆದಿಲ್ಲ. ಮುಂದಿನ ವಿಚಾರಣೆ ಮಾ.5ಕ್ಕೆ ಮುಂದೂಡಲ್ಪಟ್ಟಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಯಂಗ್ ಬಾಯ್ಸ್ ಸವಣಾಲು ಆಶ್ರಯದಲ್ಲಿ ರಾಜ್ಯಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟದ ಪ್ರೌಢಶಾಲೆ ವಿಭಾಗದ ಬಾಲಕರ ಪಂದ್ಯಾಟ ಆರಂಭ

ಕರಾವಳಿ, ಟಾಪ್ ಸುದ್ದಿಗಳು

ಕರಾವಳಿಗೆ ಅಪ್ಪಳಿಸಿದ ಉಷ್ಣ ಅಲೆ – ಮನೆಯಿಂದ ಹೊರ ಬರುವ ಮುನ್ನ ಎಚ್ಚರ ! ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ರಾಹುಲ್ ಗಾಂಧಿ ಪೌರತ್ವಕ್ಕೆ ಕಂಟಕ ! ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲಿಸಲು ಅಲಹಾಬಾದ್ ಹೈಕೋರ್ಟ್ ಆದೇಶ…

⚠️ Contents are protected on this website.