ಉಜಿರೆ, ಆ. 11 : ನೀರಚಿಲುಮೆ ಬಳಿ ಬೈಕ್ ಮತ್ತು ಸರಕಾರಿ ಬಸ್ ಮಧ್ಯೆ ಭೀಕರ ಅಪಘಾತವಾಗಿರುವ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಬೈಕ್ ಸವಾರನೋರ್ವ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಎಂದು ತಿಳಿದುಬಂದಿದೆ.
ಮೃತ ಬೈಕ್ ಸವಾರನನ್ನು ಪಾರೆಂಕಿ ಪಂಗಳ ನಿವಾಸಿ ಬಾಬು ಕುಲಾಲ್ ಪುತ್ರ ಸನತ್ (30) ಎಂದು ಗುರುತಿಸಲಾಗಿದೆ. ಸಹಸವಾರ ಭರತ್ ಬಳ್ಳಮಂಜ ಗಂಭೀರವಾಗಿ ಗಾಯಗೊಂಡಿದ್ದು, ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನೀರಚಿಲುಮೆ ಬಸ್ ನಿಲ್ದಾಣದ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದೆ.
ಘಟನೆಯಿಂದಾಗಿ ಕೆಲ ಹೊತ್ತು ಧರ್ಮಸ್ಥಳ ಉಜಿರೆ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.




