ಮಡಿಕೇರಿ : ರಸ್ತೆ ಮಧ್ಯೆಯೇ ಹೊತ್ತಿ ಉರಿದ ಪ್ರವಾಸಿ ಬಸ್ – ತಪ್ಪಿದ ಭಾರಿ ಅನಾಹುತ

Advertisement

ಮಡಿಕೇರಿ, ಡಿ. 15 : ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿ, ಮಗಡಿಪಾರೆ ಆಂಜನೇಯ ದೇವಾಲಯದ ಹತ್ತಿರ ನಡೆದಿದೆ. ಕೇರಳ ನೋಂದಣಿಯ ಖಾಸಗಿ ಬಸ್‌ ಆಗಿದ್ದು, ಮೈಸೂರಿನಿಂದ ಪ್ರವಾಸಿಗರನ್ನು ಇಳಿಸಿದ ನಂತರ ವಾಪಸ್ ತೆರಳುವ ವೇಳೆ ಈ ಅವಘಡ ಸಂಭವಿಸಿದೆನ್ನಲಾಗಿದೆ.

Advertisement

ಬಸ್‌ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿ ನಡೆದಿಲ್ಲ. ಪ್ರವಾಸಿಗರು ಬಸ್‌ನಲ್ಲಿ ಇದ್ದಿದ್ದರೆ, ಹೆಚ್ಚಿನ ಅನಾಹುತ ಸಂಭವಿಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ತೆರಳಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ಹೊತ್ತಿ ಉರಿದ ಪರಿಣಾಮ, ಕೊಡಗು-ಕೇರಳ ಮಾರ್ಗದ ಕೆಲವು ಭಾಗಗಳಲ್ಲಿ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿತ್ತು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ