ಪುತ್ತೂರು : ಏಕಾಏಕಿ ಅಸ್ವಸ್ಥಗೊಂಡ ಪ್ರಯಾಣಿಕ – ಬಸ್ ಅನ್ನು ಆಸ್ಪತ್ರೆಗೆ ಸಾಗಿಸಿ, ಮಾನವೀಯತೆ ಮೆರೆದ ಬಸ್ ಸಿಬ್ಬಂದಿ !

ಪುತ್ತೂರು, ಫೆ. 24 : ಪ್ರಯಾಣಿಕನೋರ್ವ ಏಕಾಏಕಿ ಅಸ್ವಸ್ಥಗೊಂಡ ಕಾರಣ ಬಸ್ ಸಿಬ್ಬಂದಿಗಳು ಬಸ್ ಅನ್ನು ನೇರವಾಗಿ ಆಸ್ಪತ್ರೆಗೆ ಸಾಗಿಸಿ, ಪ್ರಯಾಣಿಕನಿಗೆ ತುರ್ತು ಚಿಕಿತ್ಸೆಗೆ ಕಾರಣವಾದ ಮಾನವೀಯ ಘಟನೆಯೊಂದು ವರದಿಯಾಗಿದೆ.

Advertisement

ಪುತ್ತೂರು-ವಿಟ್ಲ ಮಾರ್ಗದಲ್ಲಿ ಸಂಚರಿಸುತ್ತಿದ್ದ ಭವಿನ್ ಎಂಬ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೋರ್ವರು ಏಕಾಏಕಿ ಅಸ್ವಸ್ಥಗೊಂಡು, ಕುಸಿದು ಬಿದ್ದಿದ್ದರು. ತಕ್ಷಣ ಬಸ್ ನಿರ್ವಾಹಕ ಚಾಲಕನ ಗಮನಕ್ಕೆ ತಂದು ಬಸ್ ಅನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆಯಲ್ಲಿ ಪ್ರಯಾಣಿಕನಿಗೆ ಸೂಕ್ತ ಪ್ರಥಮ ಚಿಕಿತ್ಸೆಯನ್ನು ನೀಡಲು ಸಹಕರಿಸಿದ್ದಾರೆ. ಬಸ್ ಸಿಬ್ಬಂದಿಗಳ ಈ ಮಾನವೀಯ ಕಾರ್ಯಕ್ಕೆ ಇದೀಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.