ಪುತ್ತೂರು : ಏಕಾಏಕಿ ಅಸ್ವಸ್ಥಗೊಂಡ ಪ್ರಯಾಣಿಕ – ಬಸ್ ಅನ್ನು ಆಸ್ಪತ್ರೆಗೆ ಸಾಗಿಸಿ, ಮಾನವೀಯತೆ ಮೆರೆದ ಬಸ್ ಸಿಬ್ಬಂದಿ !

ಪುತ್ತೂರು, ಫೆ. 24 : ಪ್ರಯಾಣಿಕನೋರ್ವ ಏಕಾಏಕಿ ಅಸ್ವಸ್ಥಗೊಂಡ ಕಾರಣ ಬಸ್ ಸಿಬ್ಬಂದಿಗಳು ಬಸ್ ಅನ್ನು ನೇರವಾಗಿ ಆಸ್ಪತ್ರೆಗೆ ಸಾಗಿಸಿ, ಪ್ರಯಾಣಿಕನಿಗೆ ತುರ್ತು ಚಿಕಿತ್ಸೆಗೆ ಕಾರಣವಾದ ಮಾನವೀಯ ಘಟನೆಯೊಂದು ವರದಿಯಾಗಿದೆ.

Advertisement

ಪುತ್ತೂರು-ವಿಟ್ಲ ಮಾರ್ಗದಲ್ಲಿ ಸಂಚರಿಸುತ್ತಿದ್ದ ಭವಿನ್ ಎಂಬ ಖಾಸಗಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೋರ್ವರು ಏಕಾಏಕಿ ಅಸ್ವಸ್ಥಗೊಂಡು, ಕುಸಿದು ಬಿದ್ದಿದ್ದರು. ತಕ್ಷಣ ಬಸ್ ನಿರ್ವಾಹಕ ಚಾಲಕನ ಗಮನಕ್ಕೆ ತಂದು ಬಸ್ ಅನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆಸ್ಪತ್ರೆಯಲ್ಲಿ ಪ್ರಯಾಣಿಕನಿಗೆ ಸೂಕ್ತ ಪ್ರಥಮ ಚಿಕಿತ್ಸೆಯನ್ನು ನೀಡಲು ಸಹಕರಿಸಿದ್ದಾರೆ. ಬಸ್ ಸಿಬ್ಬಂದಿಗಳ ಈ ಮಾನವೀಯ ಕಾರ್ಯಕ್ಕೆ ಇದೀಗ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಡಿಕೆ ಶಿವಕುಮಾರ್ ಸಂಪುಟದ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮಾಜಿ ಸ್ಪೀಕರ್ ಯು.ಟಿ.ಖಾದ‌ರ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕರ್ನಾಟಕದ 24ನೇ ಸಿಎಂ ಆಗಿ ಡಿಕೆಶಿ ಪ್ರಮಾಣ ವಚನ –  ನೊಣವಿನ ಕೆರೆ ಅಜ್ಜಯ್ಯನ ಹೆಸರಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕೊರಂಜ ಮತ್ತು ಮಚ್ಚಿನ ಶಾಲೆಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗಿ ಪರಿವರ್ತನೆ – ಶಾಸಕ ಹರೀಶ್ ಪೂಂಜಾ

⚠️ Contents are protected on this website.