ಬೆಂಗಳೂರು, ಜೂ 27 : ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರ ಏರಿಕೆಯ ಸುಳಿವನ್ನು ಸಾರಿಗೆ ಸಚಿವ ಬೈರತಿ ಸುರೇಶ್ ನೀಡಿದ್ದಾರೆ.
ಈ ಕುರಿತು ಮಾದ್ಯಮದೊಂದಿಗೆ ಮಾತನಾಡಿದ ಅವರು, ಕೇಂದ್ರ ಕಾರಣ ರಾಜ್ಯ ಕಾರಣ ಅಂತ ಮಾತಾಡಲ್ಲ. ಇಡೀ ದೇಶದಲ್ಲಿ ತೈಲ ದರ ಹೆಚ್ಚಾಗಿದೆ. ಅದಕ್ಕೆ ಅನುಪಾತವಾಗಿ ಟಿಕೆಟ್ ದರ ಹೆಚ್ಚಿಸುವ ಪ್ರಸ್ತಾವನೆ ಇದೆ. ಪ್ರಸ್ತಾವನೆ ಇನ್ನೂ ಪರಿಶೀಲನೆಯಲ್ಲಿದೆ. ಸಿಎಂ ಜತೆ ಮಾತಾಡ್ತೇವೆ, ಸರ್ಕಾರ ಏನು ತೀರ್ಮಾನ ತಗೊಳ್ಳುತ್ತೋ ಅದರ ಪ್ರಕಾರ ಹೆಚ್ಚಿಸಲಾಗುತ್ತೆ ಎಂದು ತಿಳಿಸಿದರು.
ಬಸ್ ಟಿಕೆಟ್ ದರ ಹೆಚ್ಚಳ ವಿರೋಧ ಮಾಡಲು ಇಲ್ಲಿ ಕಾರಣನೇ ಇಲ್ಲ. ಬಿಜೆಪಿಯವರಿಗೂ ತೈಲ ದರ ಹೆಚ್ಚಾಗಿರೋದು ಗೊತ್ತು. ನಮ್ಮ ಸಾರಿಗೆಯ ನಾಲ್ಕು ನಿಗಮಗಳೂ ನಷ್ಟದಲ್ಲಿ ನಡೀತಿವೆ. ಐದು ಸಾವಿರ ಕೋಟಿ ನಷ್ಟದಲ್ಲಿ ಸಾರಿಗೆ ನಿಗಮಗಳು ನಡೀತಿವೆ. ಅದನ್ನು ಸರಿದೂಗಿಸಬೇಕಲ್ಲ, ಸಿಬ್ಬಂದಿಗೂ ವೇತನ ಕೊಡಬೇಕಲ್ಲ, ಬಸ್ಗಳಿಗೆ ಡೀಸೆಲ್ ಹಾಕಿಸಬೇಕಲ್ಲ. ಚರ್ಚೆ ಮಾಡಿ ಟಿಕೆಟ್ ದರ ಬಗ್ಗೆ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.


