ಮೂಡುಬಿದಿರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಸಂಜೆ ಮೂಡುಬಿದಿರೆಗೆ ಬರಲಿದ್ದು ರಾತ್ರಿ ಡಾ.ಮೋಹನ ಆಳ್ವರ ಮನೆಯಲ್ಲಿ ವಾಸ್ತವ್ಯ ಇರಲಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಸಂಜೆ ಬಜ್ಪೆ ವಿಮಾನ ನಿಲ್ದಾಣದಿಂದ ಕಾರ್ಕಳಕ್ಕೆ ತೆರಳಲಿದ್ದು, ಅಲ್ಲಿಂದ ಮತ್ತೆ ವಾಪಾಸು ಮೂಡುಬಿದಿರೆಗೆ ಬಂದು ರಾತ್ರಿ ಡಾ.ಆಳ್ವರ ಮನೆಯಲ್ಲಿ ವಾಸ್ತವ್ಯ ಇರಲಿದ್ದಾರೆಂದು ತಿಳಿದುಬಂದಿದೆ. ನವೆಂಬರ್ ೧೯ರಂದು ಬೆಳಿಗ್ಗೆ ಪುತ್ತೂರಿನಲ್ಲಿ ನಡೆಯಲಿರುವ ಅಟಲ್ ವಿರಾಸತ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಪುತ್ತೂರು ಕಾರ್ಯಕ್ರಮದ ಬಳಿಕ ಶಿಕಾರಿಪುರಕ್ಕೆ ತೆರಳಲಿದ್ದಾರೆ. ಮೂಡುಬಿದಿರೆಯಲ್ಲಿ ಪಕ್ಷದ ಯಾವುದೇ ಕಾರ್ಯಕ್ರಮ ಇರುವುದಿಲ್ಲ ಎಂದು ತಿಳಿದು ಬಂದಿದೆ.

