ಬಂಟ್ವಾಳ, ಜೂ. 19 : ರಿಡ್ಸ್ ಕಾರು ಮತ್ತು ಸ್ಕೂಟರ್ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತಾಲೂಕಿನ ಸಜೀಪಮೂಡದ ಗ್ರಾಮದ ಕೊಳಕೆಯಲ್ಲಿ ಜೂ. 18ರ ಸಂಜೆ ವೇಳೆ ನಡೆದಿದೆ.
ಸಜೀಪನಡುವಿನ ತರಕಾರಿ ಅಂಗಡಿಯಲ್ಲಿ ಕೆಲಸಮಾಡಿತ್ತಿದ್ದ ಆಸಿರ್ (23) ಸಜೀಪದಿಂದ ಬೇಂಕ್ಯ ಕಡೆಗೆ ಪ್ರಯಾಣಿಸುವಾಗ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭರಸಕ್ಕೆ ಸ್ಕೂಟರ್ ಸಂಪೂರ್ಣ ನಜ್ಜುಗುಜ್ಜಾಗಿದೆ.
ಇನ್ನು ಸ್ಥಳೀಯರು ತಕ್ಷಣ ಸ್ಕೂಟರ್ ಸವಾರನನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.



