ಬೆಳ್ತಂಗಡಿ, ಏ. 25 : ಚಾರ್ಮಾಡಿ ಗ್ರಾಮದ ಕೊಡಿಹಿತ್ತಿಲು ನಿವಾಸಿ ಬಾಬು ಗೌಡ ಪುತ್ರ ಗಣೇಶ್ (20) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಎ. 25 ರಂದು 1:30 ಮಧ್ಯಾಹ್ನ ನಡೆದಿದೆ.
ಮನೆಯಲ್ಲಿ ಕೆಲಸವನ್ನು ಮಾಡಿಕೊಂಡು ಇದ್ದ ಯುವಕ ಯಾರು ಇಲ್ಲದ ಸಮಯದಲ್ಲಿ ಮನೆಯ ಹತ್ತಿರದ ಗುಡ್ಡದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿಡಲಾಗಿದೆ. ಮಗನ ಸಾವಿನ ವಿಷಯ ತಿಳಿದು ತಂದೆಯೂ ಆತ್ಮಹತ್ಯೆ ಯತ್ನಿಸಿದ ಘಟನೆಯು ನಡೆಯಿತು.

