ಬಂಟ್ವಾಳ, ಜು. 27 : ಬಿ.ಸಿ. ರೋಡಿನ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಉಳಿ ಗ್ರಾಮದ ಕಕ್ಯಪದವಿನ ಯುವತಿ ಲಾವಣ್ಯ ಗೌಡಳನ್ನು ಪೈಶಾಚಿಕವಾಗಿ ಹತ್ಯಗೈದ ಪ್ರಕರಣದ ಆರೋಪಿ ಚೇತನ್ ನನ್ನು ಮಂಗಳೂರು ವೆಸ್ಲಾಕ್ ಆಸ್ಪತ್ರೆಯಿಂದ ಡಿಸ್ಟಾರ್ಜ್ಗೊಳಿಸಲಾಗಿದೆ.
ಸದ್ಯ ಬಂಟ್ವಾಳ ನಗರ ಪೊಲೀಸರು ವಶದಲ್ಲಿರುವ ಈತನನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ವಿಚಾರಣೆ ಮತ್ತು ಕೆಲ ಕಾನೂನು ಪ್ರಕ್ರಿಯೆ ನಡೆಸುವ ನಿಟ್ಟಿನಲ್ಲಿ ನ್ಯಾಯಾಲಯದ ಮುಂದೆ ನಿವೇದಿಸಿ ಒಂದೆರಡು ದಿನ ಪೊಲೀಸರು ತಮ್ಮ ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.


