ಬಂಟ್ವಾಳ, ಜು. 17 : ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಕೊಲೆ ಕೃತ್ಯದ ಆರೋಪಿ ಇಲಿಪಾಷಾಣ ಸೇವಿಸಿ, ಆತ್ಮಹತ್ಯೆಗೆ ಯತ್ನಿಸಿದ್ದಾನೆಂದು ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅರುಣ್ ಕುಮಾರ್ ತಿಳಿಸಿದ್ದಾರೆ.
ಇಲಿಪಾಷಾಣ ಸೇವಿಸಿದ್ದಾನೆಂದು ಆರೋಪಿ ಚೇತನ್ ತಿಳಿಸಿದ್ದಾನೆ. ಸದ್ಯ ಆತನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಆರೋಪಿಯ ವಿರುದ್ದ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುತ್ತಿದೆ.


