ಕಾಸರಗೋಡು: ಜನಪ್ರಿಯ ಸೋಷಿಯಲ್ ಮೀಡಿಯ ಇನ್ಫ್ಲುಎನ್ಸರ್ ಆದೂರು ಚಿನ್ನು ಪಾಪು ಆತ್ಮಹತ್ಯೆ

ಕಾಸರಗೋಡು, ಫೆ 10 : ಜನಪ್ರಿಯ ಸೋಷಿಯಲ್ ಮೀಡಿಯ ಇನ್ಫ್ಲುಯೆನ್ಸರ್ ಆದೂರು ಮೂಲದ ಚಿನ್ನು ಪಾಪು ಎಂದೇ ಖ್ಯಾತಿ ಪಡೆದಿದ್ದ ರೇಶ್ಮಾ (24) ಕಾಸರಗೋಡು ನಗರ ಹೊರ ವಲಯದ ಉಳಿಯತ್ತಡ್ಕದ ಅಪಾರ್ಟ್ ಮೆಂಟ್ ವೊಂದರಲ್ಲಿ ಸೋಮವಾರ ಮಧ್ಯಾಹ್ನ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ರೇಶ್ಮಾ ಅವರ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಸೋಮವಾರ ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಈಕೆಯನ್ನು ಸ್ಥಳಿಯರು ಆಸ್ಪತ್ರೆಗೆ ತಲುಪಿಸಿದರೂ ಅದಾಗಲೇ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

Advertisement



ಚಿನ್ನು ಪಾಪು ಎಂದೇ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಕಾಣಿಸಿಕೊಂಡು ಕಾಸರಗೋಡು ಭಾಷೆಯಲ್ಲೇ ಮಾತನಾಡಿ ಜನಪ್ರಿಯತೆ ಪಡೆದಿದ್ದ ಈಕೆಗೆ 2 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಇದ್ದರು. ರೇಶ್ಮಾ ಈ ಮೊದಲೇ ವಿವಾಹಿತಳಾಗಿದ್ದು, ಒಂದು ಮಗುವನ್ನೂ ಹೊಂದಿದ್ದ ಈಕೆ ಪತಿಯಿಂದ ವಿಚ್ಛೇದಿತಳಾಗಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ.

ಸಾಮಾಜಿಕ ಜಾಲತಾಣದ ಪ್ರಭಾವೀ ವೇದಿಕೆಯಲ್ಲಿ ಕಾಣಿಸಿಕೊಂಡು ಅಪಾರ ವೀಕ್ಷಕರನ್ನು ಹೊಂದಿದ್ದ ಈಕೆಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿಚ್ಚೇದನದಿಂದ ಮಾನಸಿಕ ಒತ್ತಡ ಅಥವಾ ಇನ್ಯಾವುದೇ ಕಾರಣದಿಂದ ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಬಗ್ಗೆ ಸ್ಪಷ್ಟವಾಗಿಲ್ಲ. ಕಾಸರಗೋಡು ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ರೇಶ್ಮಾಳ ಮೊಬೈಲ್ ನ್ನು ತಪಾಸಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.