ಕಲ್ಲಡ್ಕ, ಜು. 22 : ಶಾಲಾ ವಾಹನವೊಂದರ ಮೇಲೆ ಬರಿಮಾರಿನಲ್ಲಿ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದುಬಂದಿದೆ.
ಕಲ್ಲಡ್ಕ ಶ್ರೀ ರಾಮ ಶಾಲೆಯ ವಿದ್ಯಾರ್ಥಿನಿ 6 ವರ್ಷದ ಚಿರನ್ವಿ ಮೃತ ಬಾಲಕಿ ಎಂದು ಮಾಹಿತಿ ಲಭ್ಯವಾಗಿದೆ.
ಬಂಟ್ವಾಳ ತಾಲೂಕು ಬರಿಮಾರು ಗ್ರಾಮದ ಶ್ರೀ ಕಾನಲ್ತಾಯ ದೈವಸ್ಥಾನದ ಬದಿಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.
ಘಟನೆಯಲ್ಲಿ ಹಲವು ಮಕ್ಕಳು ಗಂಭೀರ ಗಾಗೊಂಡಿದ್ದು, ಗಾಯಾಳು ವಿದ್ಯಾರ್ಥಿಗಳಿಗೆ ಸದ್ಯ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


