ಬೆಳ್ತಂಗಡಿ : ಕೃಷಿಕರೊಬ್ಬರ ಮೇಲೆ ಚಿರತೆ ದಾಳಿ – ಅಡಿಕೆ ಮರವೇರಿ ಜೀವ ಉಳಿಸಿಕೊಂಡ ಮಂಜಪ್ಪ

ಬೆಳ್ತಂಗಡಿ, ಜ.16 : ಮನೆಯಂಗಳದಲ್ಲಿ ನಿಂತಿದ್ದ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕನ್ಯಾಡಿ 1 ಗ್ರಾಮದ ಅಂಡೀರುಮಾರು ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ(62) ಚಿರತೆ ದಾಳಿಯಿಂದ ಗಾಯಗೊಂಡವರು ಎಂದು ತಿಳಿದು ಬಂದಿದೆ.

Advertisement

ಮಂಜಪ್ಪ ನಾಯ್ಕ ಇಂದು ಬೆಳಗ್ಗೆ 8:15ರ ಸುಮಾರಿಗೆ ಮನೆಯ ಅಂಗಳದಲ್ಲಿದ್ದ ವೇಳೆ ಏಕಾಏಕಿ ನುಗ್ಗಿದ ಚಿರತೆಯೊಂದು ಅವರ ಮೇಲೆ ದಾಳಿ ನಡೆಸಿದೆ. ತಕ್ಷಣ ಹತ್ತಿರದ ಅಡಿಕೆ ಮರವನ್ನೇರಿ ಅವರು ಜೀವ ಉಳಿಸಿಕೊಂಡಿದ್ದಾರೆ. ಈ ವೇಳೆ ಮಂಜಪ್ಪ ನಾಯ್ಕ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಸ್ಪತ್ರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಹಲವು ಭಾಗಗಳಲ್ಲಿ ಚಿರತೆ ದಾಳಿ ಮಾಡಿದ ಘಟನೆಗಳು ನಡೆಯುತ್ತಲೇ ಇದೆ. ಆದರೆ, ಅರಣ್ಯ ಇಲಾಖೆ ಈವರೆಗೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇನ್ನಾದರೂ, ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಸೂಕ್ತ ಕ್ರಮ ಕೈಗೊಳ್ಳಲಿ ಎಂಬುದು ನಮ್ಮ ಮನವಿಯಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.