ನವದೆಹಲಿ : ಸಿಜೆಪಿ ಹಿಂಸಾಚಾರಕ್ಕೆ ಪಾಕಿಸ್ತಾನದ ಕುಮ್ಮಕ್ಕು ? – ಪೊಲೀಸರಿಂದ ತನಿಖೆ ಚುರುಕು

ನವದೆಹಲಿ, ಜು. 21 : ರಾಷ್ಟ್ರ ರಾಜಧಾನಿಯಲ್ಲಿ ಸಿಜೆಪಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬೆನ್ನಲ್ಲೇ ಪೊಲೀಸರು ಪಾಕಿಸ್ತಾನಿ ಹ್ಯಾಂಡಲ್‌ಗಳೊಂದಿಗೆ ನಂಟಿರುವ ಸಾಮಾಜಿಕ ಜಾಲತಾಣ ಪೋಸ್ಟ್‌ಗಳ ಕುರಿತು ತನಿಖೆ ಆರಂಭಿಸಿದ್ದಾರೆ.

Advertisement

ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುಳ್ಳು ಸುದ್ದಿಗಳೇ ಸಂಘರ್ಷ ತೀವ್ರಗೊಳ್ಳಲು ಕಾರಣವಾಯಿತೇ ಎಂಬ ಬಗ್ಗೆ ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ. ಅಲ್ಲದೆ, ಪ್ರತಿಭಟನಾ ಸ್ಥಳದಲ್ಲಿ ಹಲವು ಯುವಕರ ಹೇಳಿಕೆಗಳನ್ನು ಕೂಡಾ ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿದು ಬಂದಿದೆ.

ಹಿಂಸಾಚಾರದಲ್ಲಿ ತೊಡಗಿದವರ ಪತ್ತೆಗೆ ಎಲ್ಲ ಡಿಜಿಟಲ್ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಹಿಂಸಾಚಾರದ ಹಿಂದೆ ಪಾಕ್ ಸಂಚು ಇದೆಯೇ ಎಂಬ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಘರ್ಷಣೆಗೆ ಸಂಬಂಧಿಸಿದ ಕೆಲವು ಟ್ವಿಟ್‌ಗಳು ಪಾಕಿಸ್ತಾನಿ ಸಾಮಾಜಿಕ ಜಾಲತಾಣ ಖಾತೆಗಳಿಂದ ಅಪ್‌ಲೋಡ್ ಆಗಿರುವ ಮಾಹಿತಿಯಿದ್ದು, ವದಂತಿಗಳನ್ನು ಹಬ್ಬಿಸುವ ಮೂಲಕ ಹಿಂಸೆಗೆ ಪ್ರಚೋದನೆ ನೀಡಲಾಯಿತೇ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎನ್ನಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.