ಚಿಕ್ಕಮಗಳೂರು, ಆ. 18 : ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ. ಕರ್ತವ್ಯಕ್ಕೆ ಅಡ್ಡಿ, ಪೊಲೀಸ್ ಮೇಲೆ ಹಲ್ಲೆ ತಳ್ಳಾಟ-ನೂಕಾಟ ಸೇರಿ ಸುಮೋಟೋ ಕೇಸ್ ಹಾಕಲಾಗಿದೆ.
ಪೊಲೀಸ್ ಇನ್ಸ್ಪೆಕ್ಟರ್ ಅಭಯ ಪ್ರಕಾಶ್ ದೂರು ಹಿನ್ನೆಲೆ ಪ್ರಕರಣ ದಾಖಲಾಗಿದ್ದು, ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ನಗರಾಧ್ಯಕ್ಷ ಪುಷ್ಪರಾಜ್, ಯುವ ಮೋರ್ಚಾ ಸಂತೋಷ್ ಕೊಟ್ಯಾನ್ ಸೇರಿದಂತೆ 40 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಬಿಜೆಪಿ ಮಹಿಳಾ ಕಾರ್ಯಕರ್ತರ ಮೇಲೂ ಕೇಸ್ ದಾಖಲಾಗಿದೆ.
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೋಮವಾರ ಪ್ರತಿಭಟನೆ ನಡೆಸಿತ್ತು. ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆದಿತ್ತು. ಬಳಿಕ ಏಕಾಏಕಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ ಮಾಡಿದ್ದರು. ಪೊಲೀಸರ ಜೀಪ್ ಮೇಲೆ ಹತ್ತಿ ಡಿಸಿ ಕಚೇರಿಗೆ ಮುತ್ತಿಗೆಗೆ ಯತ್ನ ಮಾಡಿದ್ದರು.




