ಮೈಸೂರು : ಅರಮನೆ ಮುಂಭಾಗ ಗ್ಯಾಸ್ ಸಿಲಿಂಡರ್ ಸ್ಫೋಟ – ತನಿಖೆ ನಡೆಸಿದ ಎನ್ಐಎ ತಂಡ !

ಮೈಸೂರು, ಡಿ. 26 : ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ, ಬಲೂನಿಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಫೋಟಗೊಂಡು ಒಬ್ಬರು ಸಾವಿಗೀಡಾದ ಸ್ಥಳವನ್ನು ಶುಕ್ರವಾರ ಎನ್‌ಐಎ ತಂಡ ಪರಿಶೀಲಿಸಿದೆ.

Advertisement

ಗುರುವಾರ ಸಂಜೆ ಸ್ಫೋಟ ಸಂಭವಿಸಿದ್ದು, ಬಲೂನು ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶದ ಕನೋಜ್ ಜಿಲ್ಲೆಯ ತೊಫಿಯ ಗ್ರಾಮದ ಸಲೀಂ (40) ಎಂಬಾತ ಸ್ಥಳದಲ್ಲೇ ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ, ನಂಜನಗೂಡಿನ ಮಂಜುಳಾ, ಕೋಲ್ಕತ್ತಾದ ಶಮಿನಾ ಶಬಿಲ್, ರಾಣೆಬೆನ್ನೂರಿನ ಕೊಟ್ರೇಶ್ ಅವರಿಗೆ ಗಾಯವಾಗಿದೆ. ಸದ್ಯ ಲಕ್ಷ್ಮಿ ಅವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡವು ಘಟನೆಯ ಬಗ್ಗೆ ಮಾಹಿತಿ ಕಲೆಹಾಕಿದ್ದು, ತನಿಖೆಗೆ ಅಗತ್ಯವಾದ ಸಾಮಗ್ರಿಗಳನ್ನು ಸ್ಥಳದಿಂದ ಸಂಗ್ರಹಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಹೊರ ರಾಜ್ಯದಿಂದ ನಗರಕ್ಕೆ ಬಂದಿದ್ದ ಮೂವರು ಯುವಕರು ಮಂಡಿ ಮೊಹಲ್ಲಾದಲ್ಲಿ ವಾಸಿಸುತ್ತಿದ್ದರು. ಅರಮನೆ ಸುತ್ತಮುತ್ತ ಬಲೂನ್ ವ್ಯಾಪರ ನಡೆಸುತ್ತಿದ್ದರು. ಸಲೀಂ ಎಂದಿನಂತೆ ಜಯಮಾರ್ತಾಂಡ ದ್ವಾರದ ಬಳಿ ವ್ಯಾಪಾರ ನಡೆಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ (ರಿ.) ಕ್ಷೇತ್ರ ಸಮಿತಿ ಬೆಳ್ತಂಗಡಿ ವತಿಯಿಂದ “ಆಟಿದ ಕಮ್ಮೆನ ಬೊಕ್ಕಗೊಬ್ಬು”

ಟಾಪ್ ಸುದ್ದಿಗಳು, ವಿದೇಶ

ಟೋಕಿಯೋ : ಜಪಾನ್ ನಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ – ಭೀಕರ ಸುನಾಮಿ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಖಾಸಗಿ ಬಸ್ – ಬೈಕ್ ಮಧ್ಯೆ ಅಪಘಾತ; ಪತಿ ಸಾವು, ಪತ್ನಿಗೆ ಗಂಭೀರ

⚠️ Contents are protected on this website.